ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಭಾರತ ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು ಇದರ ಪರಿಣಾಮವಾಗಿ ಜಿಲ್ಲೆಯಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 02 ರವರೆಗೆ 4 ದಿನಗಳ ಕಾಲ ಜಿಲ್ಲೆಯ ಕೆಲವು ಭಾಗಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ರಾಗಿ ಬೆಳೆಯು ವಿವಿಧ ಹಂತದಲ್ಲಿದ್ದು, ಮಳೆ ಗಾಳಿ ಸಂದರ್ಭದಲ್ಲಿ ನೆಲಕುರುಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿ ಇರುವ ಬೆಳೆಯನ್ನು ಸಣ್ಣ ಸಣ್ಣ ಕಟ್ಟುಗಳಾಗಿ / ಕುಚ್ಚುಗಳಾಗಿ ಕಟ್ಟಿ ಗಾಳಿಗೆ ಬೀಳದಂತೆ ಜಾಗ್ರತೆ ವಹಿಸುವುದು. ಕಟಾವಿಗೆ ಬಂದಿರುವ ರಾಗಿಯನ್ನು 4 ರಿಂದ 5 ದಿನ ಮುಂದೂಡಿ ಕಟಾವು ಮಾಡುವುದು. ಈಗಾಗಲೇ ಕಟಾವು ಮಾಡಿದ ರಾಗಿ ಜಮೀನಿನಲ್ಲಿ ಇಟ್ಟಿದ್ದರೆ ತೇವಾಂಶವಿಲ್ಲದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಶೀಲೀಂದ್ರ ಬೆಳೆದು ಹಾಳಾಗದಂತೆ ಶೇಖರಿಸಿ ಸಂರಕ್ಷಿಸುವುದು. ಜಮೀನಿನಲ್ಲಿ ನೀರು ನಿಲ್ಲದಂತೆ ಸಣ್ಣ ಸಣ್ಣ ಕಾಲುವೆಗಳಾಗಿ ಮಾಡಿ ನೀರು ಬಸಿದು ಹೋಗುವಂತೆ ನೋಡಿಕೊಂಡು ಬೆಳೆ ನಷ್ಟವಾಗದಂತೆ ಕಾಪಾಡಿಕೊಳ್ಳುವಂತೆ ಕೃಷಿ ಇಲಾಖಾ ವತಿಯಿಂದ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…