ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಭಾರತ ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು ಇದರ ಪರಿಣಾಮವಾಗಿ ಜಿಲ್ಲೆಯಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 02 ರವರೆಗೆ 4 ದಿನಗಳ ಕಾಲ ಜಿಲ್ಲೆಯ ಕೆಲವು ಭಾಗಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ರಾಗಿ ಬೆಳೆಯು ವಿವಿಧ ಹಂತದಲ್ಲಿದ್ದು, ಮಳೆ ಗಾಳಿ ಸಂದರ್ಭದಲ್ಲಿ ನೆಲಕುರುಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿ ಇರುವ ಬೆಳೆಯನ್ನು ಸಣ್ಣ ಸಣ್ಣ ಕಟ್ಟುಗಳಾಗಿ / ಕುಚ್ಚುಗಳಾಗಿ ಕಟ್ಟಿ ಗಾಳಿಗೆ ಬೀಳದಂತೆ ಜಾಗ್ರತೆ ವಹಿಸುವುದು. ಕಟಾವಿಗೆ ಬಂದಿರುವ ರಾಗಿಯನ್ನು 4 ರಿಂದ 5 ದಿನ ಮುಂದೂಡಿ ಕಟಾವು ಮಾಡುವುದು. ಈಗಾಗಲೇ ಕಟಾವು ಮಾಡಿದ ರಾಗಿ ಜಮೀನಿನಲ್ಲಿ ಇಟ್ಟಿದ್ದರೆ ತೇವಾಂಶವಿಲ್ಲದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಶೀಲೀಂದ್ರ ಬೆಳೆದು ಹಾಳಾಗದಂತೆ ಶೇಖರಿಸಿ ಸಂರಕ್ಷಿಸುವುದು. ಜಮೀನಿನಲ್ಲಿ ನೀರು ನಿಲ್ಲದಂತೆ ಸಣ್ಣ ಸಣ್ಣ ಕಾಲುವೆಗಳಾಗಿ ಮಾಡಿ ನೀರು ಬಸಿದು ಹೋಗುವಂತೆ ನೋಡಿಕೊಂಡು ಬೆಳೆ ನಷ್ಟವಾಗದಂತೆ ಕಾಪಾಡಿಕೊಳ್ಳುವಂತೆ ಕೃಷಿ ಇಲಾಖಾ ವತಿಯಿಂದ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…