ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಭಾರತ ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು ಇದರ ಪರಿಣಾಮವಾಗಿ ಜಿಲ್ಲೆಯಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 02 ರವರೆಗೆ 4 ದಿನಗಳ ಕಾಲ ಜಿಲ್ಲೆಯ ಕೆಲವು ಭಾಗಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ರಾಗಿ ಬೆಳೆಯು ವಿವಿಧ ಹಂತದಲ್ಲಿದ್ದು, ಮಳೆ ಗಾಳಿ ಸಂದರ್ಭದಲ್ಲಿ ನೆಲಕುರುಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿ ಇರುವ ಬೆಳೆಯನ್ನು ಸಣ್ಣ ಸಣ್ಣ ಕಟ್ಟುಗಳಾಗಿ / ಕುಚ್ಚುಗಳಾಗಿ ಕಟ್ಟಿ ಗಾಳಿಗೆ ಬೀಳದಂತೆ ಜಾಗ್ರತೆ ವಹಿಸುವುದು. ಕಟಾವಿಗೆ ಬಂದಿರುವ ರಾಗಿಯನ್ನು 4 ರಿಂದ 5 ದಿನ ಮುಂದೂಡಿ ಕಟಾವು ಮಾಡುವುದು. ಈಗಾಗಲೇ ಕಟಾವು ಮಾಡಿದ ರಾಗಿ ಜಮೀನಿನಲ್ಲಿ ಇಟ್ಟಿದ್ದರೆ ತೇವಾಂಶವಿಲ್ಲದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಶೀಲೀಂದ್ರ ಬೆಳೆದು ಹಾಳಾಗದಂತೆ ಶೇಖರಿಸಿ ಸಂರಕ್ಷಿಸುವುದು. ಜಮೀನಿನಲ್ಲಿ ನೀರು ನಿಲ್ಲದಂತೆ ಸಣ್ಣ ಸಣ್ಣ ಕಾಲುವೆಗಳಾಗಿ ಮಾಡಿ ನೀರು ಬಸಿದು ಹೋಗುವಂತೆ ನೋಡಿಕೊಂಡು ಬೆಳೆ ನಷ್ಟವಾಗದಂತೆ ಕಾಪಾಡಿಕೊಳ್ಳುವಂತೆ ಕೃಷಿ ಇಲಾಖಾ ವತಿಯಿಂದ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…