ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ: ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಬಂದ್​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಬಂದ್​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿದೆ.

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶುಗರ್ ಫ್ಯಾಕ್ಟರಿ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ. ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.

ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನೆಲೆ ಬೀಗ ಜಡಿಯುವಂತೆ ಮಂಡಳಿ ಆದೇಶ ಹೊರಡಿಸಿದೆ. ಇದರ ಜೊತೆಯಲ್ಲಿ ಫ್ಯಾಕ್ಟರಿಗೆ ನೀಡರೋ ವಿದ್ಯುತ್ ನೀರಿನ ಸಂರ್ಪಕ ಕಡಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ.

ಶುಗರ್ ಫ್ಯಾಕ್ಟರಿಗಳನ್ನು ಬಂದ್ ಮಾಡುವುದು ಮಾತ್ರವಲ್ಲದೆ, ಅವುಗಳ ನೋಂದಣಿಗೆ ಸಹಾಯ ಮಾಡಿದ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೆಎಸ್‌ಪಿಸಿಬಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಎರಡು ಕಾರ್ಖಾನೆಗಳಲ್ಲಿ ಅವೈಜ್ಞಾನಿಕ ನಿರ್ವಹಣೆ ಸೇರಿದಂತೆ ಹಲವು ಲೋಪಗಳು ಕಂಡು ಬಂದಿವೆ.

ಕಳೆದ ವಾರ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಕೆಎಸ್‌ಪಿಸಿಬಿ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಮಂಡಳಿ, ಸಕ್ಕರೆ ಕಾರ್ಖಾನೆಗಳನ್ನು ಮುಚ್ಚುವಂತೆ ನೋಟಿಸ್ ಜಾರಿಗೊಳಿಸಿದೆ. ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಹುಮ್ನಾಬಾದ್‌ನ ಪ್ರಸನ್ನ ಪ್ರಿ ಪ್ರೊಸೆಸಿಂಗ್‌ ಪ್ರೈಧಿವೇಟ್‌ ಲಿಮಿಟೆಡ್‌ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒಡೆತನದ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

7 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

10 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

18 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

19 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago