ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಬಂದ್ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶುಗರ್ ಫ್ಯಾಕ್ಟರಿ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ. ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.
ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನೆಲೆ ಬೀಗ ಜಡಿಯುವಂತೆ ಮಂಡಳಿ ಆದೇಶ ಹೊರಡಿಸಿದೆ. ಇದರ ಜೊತೆಯಲ್ಲಿ ಫ್ಯಾಕ್ಟರಿಗೆ ನೀಡರೋ ವಿದ್ಯುತ್ ನೀರಿನ ಸಂರ್ಪಕ ಕಡಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ.
ಕಳೆದ ವಾರ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಕೆಎಸ್ಪಿಸಿಬಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಮಂಡಳಿ, ಸಕ್ಕರೆ ಕಾರ್ಖಾನೆಗಳನ್ನು ಮುಚ್ಚುವಂತೆ ನೋಟಿಸ್ ಜಾರಿಗೊಳಿಸಿದೆ. ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಹುಮ್ನಾಬಾದ್ನ ಪ್ರಸನ್ನ ಪ್ರಿ ಪ್ರೊಸೆಸಿಂಗ್ ಪ್ರೈಧಿವೇಟ್ ಲಿಮಿಟೆಡ್ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…