ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಬಂದ್ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶುಗರ್ ಫ್ಯಾಕ್ಟರಿ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ. ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.
ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನೆಲೆ ಬೀಗ ಜಡಿಯುವಂತೆ ಮಂಡಳಿ ಆದೇಶ ಹೊರಡಿಸಿದೆ. ಇದರ ಜೊತೆಯಲ್ಲಿ ಫ್ಯಾಕ್ಟರಿಗೆ ನೀಡರೋ ವಿದ್ಯುತ್ ನೀರಿನ ಸಂರ್ಪಕ ಕಡಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ.
ಕಳೆದ ವಾರ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಕೆಎಸ್ಪಿಸಿಬಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಮಂಡಳಿ, ಸಕ್ಕರೆ ಕಾರ್ಖಾನೆಗಳನ್ನು ಮುಚ್ಚುವಂತೆ ನೋಟಿಸ್ ಜಾರಿಗೊಳಿಸಿದೆ. ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಹುಮ್ನಾಬಾದ್ನ ಪ್ರಸನ್ನ ಪ್ರಿ ಪ್ರೊಸೆಸಿಂಗ್ ಪ್ರೈಧಿವೇಟ್ ಲಿಮಿಟೆಡ್ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…