ದೊಡ್ಡಬಳ್ಳಾಪುರ : ನಗರದ ಹಲವೆಡೆ ವಾರದ ಬಡ್ಡಿ ದಂಧೆ ನಡೆಯುತ್ತಿದ್ದು, ವಾರದ ಬಡ್ಡಿಗೆ ಸಾಲ ಪಡೆದಿದ್ದ ವ್ಯಕ್ತಿ ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನಗರದ ವಿನಾಯಕ ನಗರದ ಕಾರ್ಮೆಲ್ ಜ್ಯೋತಿ ಶಾಲೆ ಬಳಿ ವಾಸವಾಗಿದ್ದ ಪರ್ವೀಜ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ದೊಡ್ಡಬಳ್ಳಾಪುರ ನಗರದ ಅಂಬೇಡ್ಕರ್ ಭವನದ ಮುಂದೆ ದ್ವಿಚಕ್ರ ವಾಹನ ಸರ್ವೀಸ್ ಇಟ್ಟುಕೊಂಡಿದ್ದ ಪರ್ವೇಜ್ ಅವರು ( ವಾರಕ್ಕೆ ಶೇ ₹7) ಬಡ್ಡಿಗೆ ಹಲವರ ಬಳಿ ಕೈ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಪರ್ವೇಜ್ ಆತ್ಮಹತ್ಯೆ ಕುರಿತು ಮಾತನಾಡಿದ ಕರುನಾಡಸೇನೆ ತಾಲ್ಲೂಕು ಅಧ್ಯಕ್ಷ ತೆರದಾಳ್ ಶ್ರೀನಿವಾಸ್ ಅವರು, ಪರ್ವೇಜ್ ನಮ್ಮ ಸಂಘಟನೆಯ ಕಾರ್ಯಕರ್ತರಾಗಿದ್ದರು, ಮೃದು ಸ್ವಭಾವದ ಅವರು ಯಾರಿಗೂ ತೊಂದರೆ ಕೊಟ್ಟವರಲ್ಲ, ಪೊಲೀಸರು ಸಜ್ಜನ ವ್ಯಕ್ತಿಯ ಸಾವಿಗೆ ಕಾರಣವಾದವರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಬೇಕು. ವಾರದ ಬಡ್ಡಿ ದಂದೆಗೆ ಕಡಿವಾಣ ಹಾಕಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…