ದೊಡ್ಡಬಳ್ಳಾಪುರ : ನಗರದ ಹಲವೆಡೆ ವಾರದ ಬಡ್ಡಿ ದಂಧೆ ನಡೆಯುತ್ತಿದ್ದು, ವಾರದ ಬಡ್ಡಿಗೆ ಸಾಲ ಪಡೆದಿದ್ದ ವ್ಯಕ್ತಿ ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನಗರದ ವಿನಾಯಕ ನಗರದ ಕಾರ್ಮೆಲ್ ಜ್ಯೋತಿ ಶಾಲೆ ಬಳಿ ವಾಸವಾಗಿದ್ದ ಪರ್ವೀಜ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ದೊಡ್ಡಬಳ್ಳಾಪುರ ನಗರದ ಅಂಬೇಡ್ಕರ್ ಭವನದ ಮುಂದೆ ದ್ವಿಚಕ್ರ ವಾಹನ ಸರ್ವೀಸ್ ಇಟ್ಟುಕೊಂಡಿದ್ದ ಪರ್ವೇಜ್ ಅವರು ( ವಾರಕ್ಕೆ ಶೇ ₹7) ಬಡ್ಡಿಗೆ ಹಲವರ ಬಳಿ ಕೈ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಪರ್ವೇಜ್ ಆತ್ಮಹತ್ಯೆ ಕುರಿತು ಮಾತನಾಡಿದ ಕರುನಾಡಸೇನೆ ತಾಲ್ಲೂಕು ಅಧ್ಯಕ್ಷ ತೆರದಾಳ್ ಶ್ರೀನಿವಾಸ್ ಅವರು, ಪರ್ವೇಜ್ ನಮ್ಮ ಸಂಘಟನೆಯ ಕಾರ್ಯಕರ್ತರಾಗಿದ್ದರು, ಮೃದು ಸ್ವಭಾವದ ಅವರು ಯಾರಿಗೂ ತೊಂದರೆ ಕೊಟ್ಟವರಲ್ಲ, ಪೊಲೀಸರು ಸಜ್ಜನ ವ್ಯಕ್ತಿಯ ಸಾವಿಗೆ ಕಾರಣವಾದವರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಬೇಕು. ವಾರದ ಬಡ್ಡಿ ದಂದೆಗೆ ಕಡಿವಾಣ ಹಾಕಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…