ದೊಡ್ಡಬಳ್ಳಾಪುರ : ನಗರದ ಹಲವೆಡೆ ವಾರದ ಬಡ್ಡಿ ದಂಧೆ ನಡೆಯುತ್ತಿದ್ದು, ವಾರದ ಬಡ್ಡಿಗೆ ಸಾಲ ಪಡೆದಿದ್ದ ವ್ಯಕ್ತಿ ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನಗರದ ವಿನಾಯಕ ನಗರದ ಕಾರ್ಮೆಲ್ ಜ್ಯೋತಿ ಶಾಲೆ ಬಳಿ ವಾಸವಾಗಿದ್ದ ಪರ್ವೀಜ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ದೊಡ್ಡಬಳ್ಳಾಪುರ ನಗರದ ಅಂಬೇಡ್ಕರ್ ಭವನದ ಮುಂದೆ ದ್ವಿಚಕ್ರ ವಾಹನ ಸರ್ವೀಸ್ ಇಟ್ಟುಕೊಂಡಿದ್ದ ಪರ್ವೇಜ್ ಅವರು ( ವಾರಕ್ಕೆ ಶೇ ₹7) ಬಡ್ಡಿಗೆ ಹಲವರ ಬಳಿ ಕೈ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಪರ್ವೇಜ್ ಆತ್ಮಹತ್ಯೆ ಕುರಿತು ಮಾತನಾಡಿದ ಕರುನಾಡಸೇನೆ ತಾಲ್ಲೂಕು ಅಧ್ಯಕ್ಷ ತೆರದಾಳ್ ಶ್ರೀನಿವಾಸ್ ಅವರು, ಪರ್ವೇಜ್ ನಮ್ಮ ಸಂಘಟನೆಯ ಕಾರ್ಯಕರ್ತರಾಗಿದ್ದರು, ಮೃದು ಸ್ವಭಾವದ ಅವರು ಯಾರಿಗೂ ತೊಂದರೆ ಕೊಟ್ಟವರಲ್ಲ, ಪೊಲೀಸರು ಸಜ್ಜನ ವ್ಯಕ್ತಿಯ ಸಾವಿಗೆ ಕಾರಣವಾದವರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಬೇಕು. ವಾರದ ಬಡ್ಡಿ ದಂದೆಗೆ ಕಡಿವಾಣ ಹಾಕಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…