ದೊಡ್ಡಬಳ್ಳಾಪುರ : ನಗರದ ಹಲವೆಡೆ ವಾರದ ಬಡ್ಡಿ ದಂಧೆ ನಡೆಯುತ್ತಿದ್ದು, ವಾರದ ಬಡ್ಡಿಗೆ ಸಾಲ ಪಡೆದಿದ್ದ ವ್ಯಕ್ತಿ ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನಗರದ ವಿನಾಯಕ ನಗರದ ಕಾರ್ಮೆಲ್ ಜ್ಯೋತಿ ಶಾಲೆ ಬಳಿ ವಾಸವಾಗಿದ್ದ ಪರ್ವೀಜ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ದೊಡ್ಡಬಳ್ಳಾಪುರ ನಗರದ ಅಂಬೇಡ್ಕರ್ ಭವನದ ಮುಂದೆ ದ್ವಿಚಕ್ರ ವಾಹನ ಸರ್ವೀಸ್ ಇಟ್ಟುಕೊಂಡಿದ್ದ ಪರ್ವೇಜ್ ಅವರು ( ವಾರಕ್ಕೆ ಶೇ ₹7) ಬಡ್ಡಿಗೆ ಹಲವರ ಬಳಿ ಕೈ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಪರ್ವೇಜ್ ಆತ್ಮಹತ್ಯೆ ಕುರಿತು ಮಾತನಾಡಿದ ಕರುನಾಡಸೇನೆ ತಾಲ್ಲೂಕು ಅಧ್ಯಕ್ಷ ತೆರದಾಳ್ ಶ್ರೀನಿವಾಸ್ ಅವರು, ಪರ್ವೇಜ್ ನಮ್ಮ ಸಂಘಟನೆಯ ಕಾರ್ಯಕರ್ತರಾಗಿದ್ದರು, ಮೃದು ಸ್ವಭಾವದ ಅವರು ಯಾರಿಗೂ ತೊಂದರೆ ಕೊಟ್ಟವರಲ್ಲ, ಪೊಲೀಸರು ಸಜ್ಜನ ವ್ಯಕ್ತಿಯ ಸಾವಿಗೆ ಕಾರಣವಾದವರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಬೇಕು. ವಾರದ ಬಡ್ಡಿ ದಂದೆಗೆ ಕಡಿವಾಣ ಹಾಕಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…