ದೊಡ್ಡಬಳ್ಳಾಪುರ : ನಗರದ ಹಲವೆಡೆ ವಾರದ ಬಡ್ಡಿ ದಂಧೆ ನಡೆಯುತ್ತಿದ್ದು, ವಾರದ ಬಡ್ಡಿಗೆ ಸಾಲ ಪಡೆದಿದ್ದ ವ್ಯಕ್ತಿ ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನಗರದ ವಿನಾಯಕ ನಗರದ ಕಾರ್ಮೆಲ್ ಜ್ಯೋತಿ ಶಾಲೆ ಬಳಿ ವಾಸವಾಗಿದ್ದ ಪರ್ವೀಜ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ದೊಡ್ಡಬಳ್ಳಾಪುರ ನಗರದ ಅಂಬೇಡ್ಕರ್ ಭವನದ ಮುಂದೆ ದ್ವಿಚಕ್ರ ವಾಹನ ಸರ್ವೀಸ್ ಇಟ್ಟುಕೊಂಡಿದ್ದ ಪರ್ವೇಜ್ ಅವರು ( ವಾರಕ್ಕೆ ಶೇ ₹7) ಬಡ್ಡಿಗೆ ಹಲವರ ಬಳಿ ಕೈ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಪರ್ವೇಜ್ ಆತ್ಮಹತ್ಯೆ ಕುರಿತು ಮಾತನಾಡಿದ ಕರುನಾಡಸೇನೆ ತಾಲ್ಲೂಕು ಅಧ್ಯಕ್ಷ ತೆರದಾಳ್ ಶ್ರೀನಿವಾಸ್ ಅವರು, ಪರ್ವೇಜ್ ನಮ್ಮ ಸಂಘಟನೆಯ ಕಾರ್ಯಕರ್ತರಾಗಿದ್ದರು, ಮೃದು ಸ್ವಭಾವದ ಅವರು ಯಾರಿಗೂ ತೊಂದರೆ ಕೊಟ್ಟವರಲ್ಲ, ಪೊಲೀಸರು ಸಜ್ಜನ ವ್ಯಕ್ತಿಯ ಸಾವಿಗೆ ಕಾರಣವಾದವರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಬೇಕು. ವಾರದ ಬಡ್ಡಿ ದಂದೆಗೆ ಕಡಿವಾಣ ಹಾಕಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…