ದೊಡ್ಡಬಳ್ಳಾಪುರ : ನಗರದ ಹಲವೆಡೆ ವಾರದ ಬಡ್ಡಿ ದಂಧೆ ನಡೆಯುತ್ತಿದ್ದು, ವಾರದ ಬಡ್ಡಿಗೆ ಸಾಲ ಪಡೆದಿದ್ದ ವ್ಯಕ್ತಿ ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನಗರದ ವಿನಾಯಕ ನಗರದ ಕಾರ್ಮೆಲ್ ಜ್ಯೋತಿ ಶಾಲೆ ಬಳಿ ವಾಸವಾಗಿದ್ದ ಪರ್ವೀಜ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ದೊಡ್ಡಬಳ್ಳಾಪುರ ನಗರದ ಅಂಬೇಡ್ಕರ್ ಭವನದ ಮುಂದೆ ದ್ವಿಚಕ್ರ ವಾಹನ ಸರ್ವೀಸ್ ಇಟ್ಟುಕೊಂಡಿದ್ದ ಪರ್ವೇಜ್ ಅವರು ( ವಾರಕ್ಕೆ ಶೇ ₹7) ಬಡ್ಡಿಗೆ ಹಲವರ ಬಳಿ ಕೈ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಪರ್ವೇಜ್ ಆತ್ಮಹತ್ಯೆ ಕುರಿತು ಮಾತನಾಡಿದ ಕರುನಾಡಸೇನೆ ತಾಲ್ಲೂಕು ಅಧ್ಯಕ್ಷ ತೆರದಾಳ್ ಶ್ರೀನಿವಾಸ್ ಅವರು, ಪರ್ವೇಜ್ ನಮ್ಮ ಸಂಘಟನೆಯ ಕಾರ್ಯಕರ್ತರಾಗಿದ್ದರು, ಮೃದು ಸ್ವಭಾವದ ಅವರು ಯಾರಿಗೂ ತೊಂದರೆ ಕೊಟ್ಟವರಲ್ಲ, ಪೊಲೀಸರು ಸಜ್ಜನ ವ್ಯಕ್ತಿಯ ಸಾವಿಗೆ ಕಾರಣವಾದವರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಬೇಕು. ವಾರದ ಬಡ್ಡಿ ದಂದೆಗೆ ಕಡಿವಾಣ ಹಾಕಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…