ದೊಡ್ಡಬಳ್ಳಾಪುರ : ನಗರದ ಹಲವೆಡೆ ವಾರದ ಬಡ್ಡಿ ದಂಧೆ ನಡೆಯುತ್ತಿದ್ದು, ವಾರದ ಬಡ್ಡಿಗೆ ಸಾಲ ಪಡೆದಿದ್ದ ವ್ಯಕ್ತಿ ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನಗರದ ವಿನಾಯಕ ನಗರದ ಕಾರ್ಮೆಲ್ ಜ್ಯೋತಿ ಶಾಲೆ ಬಳಿ ವಾಸವಾಗಿದ್ದ ಪರ್ವೀಜ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ದೊಡ್ಡಬಳ್ಳಾಪುರ ನಗರದ ಅಂಬೇಡ್ಕರ್ ಭವನದ ಮುಂದೆ ದ್ವಿಚಕ್ರ ವಾಹನ ಸರ್ವೀಸ್ ಇಟ್ಟುಕೊಂಡಿದ್ದ ಪರ್ವೇಜ್ ಅವರು ( ವಾರಕ್ಕೆ ಶೇ ₹7) ಬಡ್ಡಿಗೆ ಹಲವರ ಬಳಿ ಕೈ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಪರ್ವೇಜ್ ಆತ್ಮಹತ್ಯೆ ಕುರಿತು ಮಾತನಾಡಿದ ಕರುನಾಡಸೇನೆ ತಾಲ್ಲೂಕು ಅಧ್ಯಕ್ಷ ತೆರದಾಳ್ ಶ್ರೀನಿವಾಸ್ ಅವರು, ಪರ್ವೇಜ್ ನಮ್ಮ ಸಂಘಟನೆಯ ಕಾರ್ಯಕರ್ತರಾಗಿದ್ದರು, ಮೃದು ಸ್ವಭಾವದ ಅವರು ಯಾರಿಗೂ ತೊಂದರೆ ಕೊಟ್ಟವರಲ್ಲ, ಪೊಲೀಸರು ಸಜ್ಜನ ವ್ಯಕ್ತಿಯ ಸಾವಿಗೆ ಕಾರಣವಾದವರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಬೇಕು. ವಾರದ ಬಡ್ಡಿ ದಂದೆಗೆ ಕಡಿವಾಣ ಹಾಕಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…