Categories: ಬೆಳಗಾವಿ

ವಾರದ ಬಡ್ಡಿ ಹಣ ನೀಡದ್ದಕ್ಕೆ ಮನಸೋ ಇಚ್ಛೆ ಹಲ್ಲೆ

ವಾರದ ಬಡ್ಡಿಯ ಹಣ ನೀಡದಿದ್ದಕ್ಕೆ ವ್ಯಕ್ತಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖನದಾಳ ಗ್ರಾಮದಲ್ಲಿ ನಡೆದಿದೆ.

ಬಡ್ಡಿ ನಾಗಪ್ಪ ಮಾಯಪ್ಪ ವಡ್ಡರ ಎಂಬಾತ ರೋಹಿತ ವಡ್ಡರ ಎಂಬುವವನ ಮೇಲೆ ಹಣದ ವಿಷಯಕ್ಕೆ ಮನ ಬಂದಂತೆ ಕಲ್ಲಿನಿಂದ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.

ರೊಹೀತ ವಡ್ಡರ್ ಎಂಬಾತ ವಾರದ ಬಡ್ಡಿಗೆ ಎರಡು ಸಾವಿರ ಹಣವನ್ನು  ಬಡ್ಡಿ ನಾಗಪ್ಪ ಮಾಯಪ್ಪ ವಡ್ಡರ ಬಳಿ ಪಡೆದಿದ್ದ.

ಎರಡು ಸಾವಿರ ಹಣಕ್ಕೆ ವಾರಕ್ಕೆ 500ರೂ. ಬಡ್ಡಿ ಕೊಡಬೇಕಿತ್ತು. ಒಂದು ವಾರ ಬಡ್ಡಿ ಹಣ ಕೊಡಲು ತಡವಾಗಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಕಲ್ಲಿನಿಂದ ತಲೆಗೆ ಬಲವಾಗಿ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿರುವ ವಿಡಿಯೋ ಮೊಬೈಲ್ ರೆಕಾರ್ಡ್ ಆಗಿದೆ.

ಸದ್ಯ ಹಲ್ಲೆಗೊಳಗಾದವನಿಗೆ ಹಾರೂಗೇರಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ನಾಗಪ್ಪಾ ವಡ್ಡರ ವಿರುದ್ದ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

10 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

16 hours ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

18 hours ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

18 hours ago

ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…

20 hours ago

ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence)

ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…

23 hours ago