ವಾರ್ಡ್ ಗಳಲ್ಲಿ ದಿನನಿತ್ಯ ಕಾಡುವ ಕುಡಿಯುವ ನೀರಿನ ಸಮಸ್ಯೆ, ಒಳಚರಂಡಿ ಸಮಸ್ಯೆ, ಬೀದಿನಾಯಿಗಳ ಹಾವಳಿ, ಕಸ ವಿಲೇವಾರಿ, ರಸ್ತೆಗಳ ಅಗಲೀಕರಣ, ರಸ್ತೆಗಳಲ್ಲಿನ ಗುಂಡಿಗಳ ಅವಾಂತರ ಸೇರಿದಂತೆ ಇತರೆ ಸಮಸ್ಯೆಗಳಿಗೆ ಶೀಘ್ರವಾಗಿ ಮುಕ್ತಿ ನೀಡಿ ಎಂದು ಶಾಸಕ ಧೀರಜ್ ಮುನಿರಾಜು ಅವರಿಗೆ ಸಾರ್ವಜನಿಕರು ಒತ್ತಾಯಿಸಿದರು.
ನಗರಸಭೆ ಆವರಣದಲ್ಲಿ ಗುರುವಾರ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರು ತಮ್ಮ ವಾರ್ಡ್ ಗಳಲ್ಲಿನ ದಿನನಿತ್ಯದ ಸಮಸ್ಯೆಗಳ ಸರಮಾಲೆಯನ್ನ ಎಳೆ ಎಳೆಯಾಗಿ ಬಿಚ್ಚಿಟ್ಟರು.
ರೆವೆನ್ಯೂ ಸೈಟ್ ಗಳಿಗೆ ನಗರಸಭೆಯಿಂದ ಖಾತೆ ನೀಡಲು ಬರುವುದಿಲ್ಲ. ಖಾತೆ ಇಲ್ಲದ ಸೈಟ್ ಗಳಲ್ಲಿ ಮನೆಗಳ ನಿರ್ಮಾಣಕ್ಕೆ ನಗರಸಭೆಯಿಂದ ಅನುಮತಿ ನೀಡುವುದಿಲ್ಲ. ಬಡವರು ಕೂಡಿಟ್ಟ ಹಣದಿಂದ ನಿವೇಶನ ಖರೀದಿ ಮಾಡಿರುತ್ತಾರೆ. ಇವರ ನೀತಿ ನಿಯಮಗಳಿಂದ ಬಡವರು ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ಇದಕ್ಕೆ ನ್ಯಾಯಬದ್ಧ ಪರಿಹಾರ ಒದಗಿಸಬೇಕು ಎಂದು ಜನಸಾಮಾನ್ಯರು ಆಗ್ರಹಿಸಿದರು.
ಎಂಜಿನಿಯರ್ ರಾಮೇಗೌಡ ಉತ್ತರಿಸಿ, ಕಾನೂನಡಿ ಸೆಕ್ಷನ್ 187ರ ಪ್ರಕಾರ ಅನಧಿಕೃತ ಕಟ್ಟಡ ಬಗ್ಗೆ ದೂರು ಬಂದರೆ, ಮೂರು ನೋಟಿಸ್ ನೀಡಿ ಕಟ್ಟಡ ತೆರವು ಮಾಡಲಾಗುತ್ತದೆ. ಸೆಕ್ಷನ್ 102ರ ಪ್ರಕಾರ ಎರಡು ಪಟ್ಟು ದಂಡ , ತೆರಿಗೆ ಪಾವತಿಸಿ ಸಕ್ರಮ ಮಾಡಿಕೊಳ್ಳಬಹುದಾಗಿದೆ ಎಂದರು.
ಶಾಸಕ ದೀರಜ್ ಮುನಿರಾಜು ಸಾರ್ವಜನಿಕರ ಮನವಿಗಳಿಗೆ ಉತ್ತರ ನೀಡಿ, ನಗರದಲ್ಲಿ ಹೆಚ್ಚು ವಾಹನ ದಟ್ಟಣೆ ಇರುವ 7 ಪ್ರಮುಖ ವೃತ್ತಗಳನ್ನು ಗುರುತಿಸಲಾಗಿದೆ. ಈ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ದೀಪಗಳ ಅಳವಡಿಕೆ, ನಗರದ ಮೂಲಕ ಹಾದು ಹೋಗಿರುವ ಯಲಹಂಕ-ಹಿಂದೂಪುರ ಹೆದ್ದಾರಿಯ ರೈಲ್ವೆ ನಿಲ್ದಾಣ, ಡಿ,ಕ್ರಾಸ್ ವೃತ್ತಗಳ ಬಳಿ ಮೇಲು ಸೇತುವೆ ನಿರ್ಮಾಣ, ರಸ್ತೆಗಳಲ್ಲಿ ವಿದ್ಯುತ್ ದೀಪಗಳ ಅಳವಡಿಕೆಗೆ ರಾಜ್ಯ ಹೆದ್ದಾರಿ ನಿರ್ಮಾಣ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗಿದೆ. ನಗರಕ್ಕೆ ಪ್ರತ್ಯೇಕವಾಗಿ ಸಂಚಾರ ನಿಯಂತ್ರಣ ಪೊಲೀಸ್ ಠಾಣೆ ಮಂಜೂರಾತಿಗೆ ಅಗತ್ಯ ಇರುವ ಎಲ್ಲಾ ಪ್ರಕ್ರಿಯೆಗಳು ನಡೆಯುತ್ತಿವೆ. ನಗರ ವ್ಯಾಪ್ತಿಯ ಶಾಲಾ ಕಾಲೇಜು ರಸ್ತೆಗಳಲ್ಲಿ ಬೈಕ್, ಕಾರುಗಳ ವೇಗ ಮಿತಿ ಕಡಿವಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳು ಪೊಲೀಸರಿಗೆ ಸೂಚನೆ ನೀಡಲಾಗುವುದು ಎಂದರು.
4ನೇ ವಾರ್ಡ್ ನಿವಾಸಿ ರಮೇಶ್ ಮಾತನಾಡಿ, ಕೆ.ಆರ್.ಮಾರುಕಟ್ಟೆಯಲ್ಲಿನ ವ್ಯಾಪಾರಿಗಳ ಅಂಗಡಿ ಮಳಿಗೆಗಳನ್ನು ಕೆಡವಿಹಾಕಿ 10 ವರ್ಷಗಳು ಕಳುಯುತ್ತ ಬಂದಿದೆ. ಇದುವರೆಗೂ ನಗರಸಭೆ ವತಿಯಿಂದ ಅಂಗಡಿ ಮಳಿಗೆಗಳನ್ನು ನಿರ್ಮಿಸಿಕೊಟ್ಟಿಲ್ಲ. ಇದರಿಂದಾಗಿ ತರಕಾರಿ, ಹಣ್ಣುಗಳನ್ನು ರಸ್ತೆ ಬದಿಯಲ್ಲಿ ಕುಳಿತು ಮಾರಾಟ ಮಾಡುವಂತಾಗಿದೆ. ನಗರದಲ್ಲಿ ಕುಡಿಯುವ ನೀರಿನ ಕೊರತೆ ಹೆಚ್ಚಾಗುತ್ತಿದೆ. ಬೆಳೆಯುತ್ತಿರುವ ನಗರದ ಜನರ ನೀರಿನ ಕೊರತೆ ನೀಗಿಸಲು ಜಕ್ಕಲಮೊಡಗು ಜಲಾಶಯದ ನೀರು ಕೊರತೆಯಾಗುತ್ತಿದೆ. ಹೀಗಾಗಿ ಘಾಟಿ ಸಮೀಪದ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ನಿಂದ ನೀರು ತರುವ ಯೋಜನೆ ಅನುಷ್ಠಾನಕ್ಕೆ ತರಬೇಕು ಎಂದು ಸಲಹೆ ನೀಡಿದರು.
ಅಂಗವಿಕಲರಾದ ಸಿದ್ದಪ್ಪ ಮಾತನಾಡಿ, ಮಾದಗೊಂಡನಹಳ್ಳಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಸ್ತೆಯಲ್ಲಿ ಯಾವುದೋ ನೆಪಗಳಲ್ಲಿ ಸಂಜೆ ವೇಳೆ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಹೊಡೆಯುವವರ ಹಾವಳಿ ಹೆಚ್ಚಾಗಿದೆ. ರಸ್ತೆ ಬದಿಗಳಲ್ಲೇ ಜನ್ಮದಿನಾಚಣೆಗಳನ್ನು ಆಚರಿಸಿಕೊಳ್ಳುತ್ತ ಪಟಾಕಿಗಳನ್ನು ಸಿಡಿಸುತ್ತಿದ್ದಾರೆ. ಈ ಬಗ್ಗೆ ಕಡಿವಾಣಹಾಕಿಸಬೇಕು ಎಂದು ಶಾಸಕರ ಗಮನಕ್ಕೆ ತಂದರು.
ನಮ್ಮ ನಗರ, ನಮ್ಮ ಊರು ಎಂಬ ಮನೋಬಾವನೆ ಸಾರ್ವಜನಿಕರಲ್ಲಿ ಮೂಡಬೇಕು. ಸದ್ಯ ನಗರದಲ್ಲಿ 17 ಕೋಟಿ 10ಲಕ್ಷ ರೂ.ಗಳ ಕಾಮಗಾರಿ ನಡೆಯುತ್ತಿದೆ. ಒಳ ಚರಂಡಿ ಮತ್ತು ನೂತನ ಎಸ್ ಟಿಪಿ ನಿರ್ಮಾಣಕ್ಕೆ ಸ್ಥಳವನ್ನು ಗುರುತಿಸಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ 8 ಎಕರೆ ಜಮೀನು ಖರೀದಿಸಲು ಕ್ರಮ ವಹಿಸಲಾಗಿದೆ ಎಂದರು.
ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗದಿದ್ದರೂ ಗರಿಷ್ಠ ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು. ನಗರಸಭೆಗೆ ಬರುವ ಪ್ರತಿಯೊಂದು ಅರ್ಜಿಯೂ ಸಕಾಲದಲ್ಲಿ ನಮೂದಾಗಬೇಕು. ಮುಂದಿನ ದಿನಗಳಲ್ಲಿ ಅಮೃತ್.2 ರಲ್ಲಿ ಅನುದಾನ ಸಿಗಲಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ಪಕ್ಷದ ಸದಸ್ಯರಿಗೆ ಅನುದಾನ ನೀಡುತ್ತಿಲ್ಲ. ವಿಪಕ್ಷ ಸದಸ್ಯರಿಗೆ ಅನುದಾನ ಮರಿಚಿಕೆಯಾಗಿದೆ. ರಸ್ತೆಗಳ ಅಭಿವೃದ್ದಿಗೆ ಪಕ್ಕದ ಮೂರು ತಾಲ್ಲೂಕುಗಳಿಗೆ 20 ಕೋಟಿ ರೂ. ಅನುದಾನವನ್ನು ಸರ್ಕಾರ ನೀಡಿದೆ. ನಮ್ಮ ತಾಲ್ಲೂಕಿಗೆ ಕೇವಲ 10 ಕೋಟಿ ರೂ. ಅನುದಾನದ ಭರವಸೆ ಸಿಕ್ಕಿದೆ ಎಂದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…