Categories: Home

ವಾರ್ಡ್ ನಂ16 ರಲ್ಲಿ 1.46 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕೋಲಾರ: ನಗರಸಭೆ ವ್ಯಾಪ್ತಿಯ ವಾರ್ಡ್‌ ನಂ 16ರ ಸದಸ್ಯ ಫೈರೋಜ್ ಖಾನ್ ನೇತೃತ್ವದಲ್ಲಿ ಸುಮಾರು 1.46 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಗುದ್ದಲಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ನಗರಸಭೆ ವ್ಯಾಪ್ತಿಗೆ ಅಲ್ಪಸಂಖ್ಯಾತರ ವಿಶೇಷ ಅನುದಾನದಲ್ಲಿ ಈಗಾಗಲೇ 10 ಕೋಟಿ ಅನುದಾನ ಬಿಡುಗಡೆಯಾಗಿದ್ದು ಅದರಲ್ಲಿ 5 ಕೋಟಿ ವೆಚ್ಚದ ಕಾಮಗಾರಿಗಳು ಮುಗಿದಿದ್ದು ಉಳಿದ 5 ಕೋಟಿ ವೆಚ್ಚದ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ ಈ ರಸ್ತೆಗೆ ಹಿಂದೆ ಮೂರುನಾಲ್ಕು ಬಾರಿ ಗುದ್ದಲಿ ಪೂಜೆ ಸಲ್ಲಿಸಿದ್ದಾರೆ ಆದರೆ ಕಾಮಗಾರಿ ಪ್ರಾರಂಭಿಸಿಲ್ಲ ಎಂದು ದೂರುಗಳು ಬಂದಿದೆ ಮತ್ತೆ ದೂರುಗಳ ಬರಬಾರದು ಕೂಡಲೇ ಕಾಮಗಾರಿಯನ್ನು ಪ್ರಾರಂಭಿಸಿ 10 ದಿನದಲ್ಲಿ ಮುಗಿಸಬೇಕು ಎಂದು ಗುತ್ತಿಗೆದಾರನಿಗೆ ಸೂಚಿಸಿದರು.

ನಗರಸಭೆ ವ್ಯಾಪ್ತಿಯ ಅಭಿವೃದ್ಧಿಗೆ 30 ಕೋಟಿ ರೂಪಾಯಿಗಳ ಮುಖ್ಯಮಂತ್ರಿ ವಿಶೇಷ ಅನುದಾನವು ಬಿಡುಗಡೆಯಾಗಿದೆ ನಗರಸಭೆ ವ್ಯಾಪ್ತಿಯ ಅಭಿವೃದ್ಧಿಯ ದೃಷ್ಟಿಯಿಂದ ಕಾಮಗಾರಿಗಳು ಕುರಿತಂತೆ ರೂಪರೇಷೆಗಳನ್ನು ರಚಿಸಲು ಖಾಸಗಿ ಸಂಸ್ಥೆಗೆ ಜವಾಬ್ದಾರಿ ನೀಡಲಾಗಿದ್ದು ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಯುಜಿಡಿ ಇಲ್ಲದ ಕಡೆಯೂ ಯುಜಿಡಿ ಮಾಡಿಸಲು ಕ್ರಮ ವಹಿಸಿ ಸುಂದರ ನಗರ ನಿರ್ಮಾಣಕ್ಕೆ ಅಧ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರು ಶಾಸಕರಿಗೆ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರು ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕುರಿಗಳ ರಮೇಶ್, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನಗರಸಭೆ ಸದಸ್ಯರಾದ ಎನ್.ಅಂಬರೀಷ್, ಅಫ್ಸರ್, ಏಜಾಜ್ ಪಾಷ, ಸುರೇಶ್ ಬಾಬು, ಷಾಮೀರ್ ಪಾಷ, ಸೈಯದ್ ಸಮೀ, ಹಿದಾಯತ್, ಷಫಿ, ಏಜಾಜ್ ಪಾಷ, ರಫೀಕ್, ಸಾಧೀಕ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಟ್ರಾಕ್ಟರ್ ಮುಸ್ತಫಾ, ನಜೀರ್, ಗೌಸ್ ಪೀರ್, ನಜೀರ್, ಆರೀಫ್, ಅಯೂಬ್, ಅಸ್ಲಂ, ಸೀಪೂರ್ ಅಕ್ರಂ, ಅರ್ಬಾಜ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

8 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

21 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

22 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

23 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

1 day ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago