Categories: Home

ವಾರ್ಡ್ ನಂ16 ರಲ್ಲಿ 1.46 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕೋಲಾರ: ನಗರಸಭೆ ವ್ಯಾಪ್ತಿಯ ವಾರ್ಡ್‌ ನಂ 16ರ ಸದಸ್ಯ ಫೈರೋಜ್ ಖಾನ್ ನೇತೃತ್ವದಲ್ಲಿ ಸುಮಾರು 1.46 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಗುದ್ದಲಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ನಗರಸಭೆ ವ್ಯಾಪ್ತಿಗೆ ಅಲ್ಪಸಂಖ್ಯಾತರ ವಿಶೇಷ ಅನುದಾನದಲ್ಲಿ ಈಗಾಗಲೇ 10 ಕೋಟಿ ಅನುದಾನ ಬಿಡುಗಡೆಯಾಗಿದ್ದು ಅದರಲ್ಲಿ 5 ಕೋಟಿ ವೆಚ್ಚದ ಕಾಮಗಾರಿಗಳು ಮುಗಿದಿದ್ದು ಉಳಿದ 5 ಕೋಟಿ ವೆಚ್ಚದ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ ಈ ರಸ್ತೆಗೆ ಹಿಂದೆ ಮೂರುನಾಲ್ಕು ಬಾರಿ ಗುದ್ದಲಿ ಪೂಜೆ ಸಲ್ಲಿಸಿದ್ದಾರೆ ಆದರೆ ಕಾಮಗಾರಿ ಪ್ರಾರಂಭಿಸಿಲ್ಲ ಎಂದು ದೂರುಗಳು ಬಂದಿದೆ ಮತ್ತೆ ದೂರುಗಳ ಬರಬಾರದು ಕೂಡಲೇ ಕಾಮಗಾರಿಯನ್ನು ಪ್ರಾರಂಭಿಸಿ 10 ದಿನದಲ್ಲಿ ಮುಗಿಸಬೇಕು ಎಂದು ಗುತ್ತಿಗೆದಾರನಿಗೆ ಸೂಚಿಸಿದರು.

ನಗರಸಭೆ ವ್ಯಾಪ್ತಿಯ ಅಭಿವೃದ್ಧಿಗೆ 30 ಕೋಟಿ ರೂಪಾಯಿಗಳ ಮುಖ್ಯಮಂತ್ರಿ ವಿಶೇಷ ಅನುದಾನವು ಬಿಡುಗಡೆಯಾಗಿದೆ ನಗರಸಭೆ ವ್ಯಾಪ್ತಿಯ ಅಭಿವೃದ್ಧಿಯ ದೃಷ್ಟಿಯಿಂದ ಕಾಮಗಾರಿಗಳು ಕುರಿತಂತೆ ರೂಪರೇಷೆಗಳನ್ನು ರಚಿಸಲು ಖಾಸಗಿ ಸಂಸ್ಥೆಗೆ ಜವಾಬ್ದಾರಿ ನೀಡಲಾಗಿದ್ದು ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಯುಜಿಡಿ ಇಲ್ಲದ ಕಡೆಯೂ ಯುಜಿಡಿ ಮಾಡಿಸಲು ಕ್ರಮ ವಹಿಸಿ ಸುಂದರ ನಗರ ನಿರ್ಮಾಣಕ್ಕೆ ಅಧ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರು ಶಾಸಕರಿಗೆ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರು ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕುರಿಗಳ ರಮೇಶ್, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನಗರಸಭೆ ಸದಸ್ಯರಾದ ಎನ್.ಅಂಬರೀಷ್, ಅಫ್ಸರ್, ಏಜಾಜ್ ಪಾಷ, ಸುರೇಶ್ ಬಾಬು, ಷಾಮೀರ್ ಪಾಷ, ಸೈಯದ್ ಸಮೀ, ಹಿದಾಯತ್, ಷಫಿ, ಏಜಾಜ್ ಪಾಷ, ರಫೀಕ್, ಸಾಧೀಕ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಟ್ರಾಕ್ಟರ್ ಮುಸ್ತಫಾ, ನಜೀರ್, ಗೌಸ್ ಪೀರ್, ನಜೀರ್, ಆರೀಫ್, ಅಯೂಬ್, ಅಸ್ಲಂ, ಸೀಪೂರ್ ಅಕ್ರಂ, ಅರ್ಬಾಜ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

10 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

10 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

15 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 day ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago