ವಾಲ್ಮಿಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

ದೇವನಹಳ್ಳಿ ತಾಲ್ಲೂಕಿನ ಹುರುಳುಗುರ್ಕಿ ಬಳಿ ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಜಾಗ ಗುರ್ತಿಸಲಾಗಿದ್ದು ಜಾಗಕ್ಕೆ ಕಂಪೌಂಡ್ ನಿರ್ಮಾಸಲು ಶಾಸಕರ ನಿಧಿಯಿಂದ 10 ಲಕ್ಷ ರೂ. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ‘ಶ್ರೀ ಮಹರ್ಷಿ ವಾಲ್ಮೀಕಿ’ರವರ ಜಯಂತ್ಯೋತ್ಸವ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ಮಹರ್ಷಿ ವಾಲ್ಮೀಕಿ ರವರು ಮಹಾನ್ ವ್ಯಕ್ತಿ, ಕಾಲಜ್ಞಾನಿ. ಅವರು ನಡೆದ ಹಾದಿ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಬೇಕು. ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಎಂದೆಂದಿಗೂ ಸಾರ್ವಕಾಲಿಕ. ಪ್ರತಿಯೊಬ್ಬರೂ ವಾಲ್ಮೀಕಿಯವರ ಆದರ್ಶ ಜೀವನವನ್ನು ತಮ್ಮ ಬದುಕಿನಲ್ಲಿ ರೂಡಿಸಿಕೊಂಡು ನಡೆಯಬೇಕಿದೆ ಎಂದರು.

ನಾನು ಲೋಕಸಭಾ ಸದಸ್ಯನಾಗಿದ್ದಾಗ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 4 ವಾಲ್ಮೀಕಿ ವಸತಿ ಶಾಲೆಗಳನ್ನು ಆರಂಭಿಸಿದೆ. ಇದರಿಂದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆ ಅಲಂಕರಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ರಾಜ್ಯದ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ. ಹೆಚ್ಚಿನ ಒತ್ತು ನೀಡುತ್ತಿದೆ. ವಾಲ್ಮೀಕಿ ವಸತಿ ಶಾಲೆಗಳು ಆರಂಭಿಸುವ ಮೂಲಕ ಗುಣಮಟ್ಟದ ಶಿಕ್ಷಣದ ಜತೆಗೆ ಮಕ್ಕಳ ಸರ್ವೋತೋಮುಖ ಅಭಿವೃದ್ಧಿ ಮಾಡುವ ಕನಸು ಕಂಡಿದ್ದೇವೆ. ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಬಾಲಕಿಯರ ವಸತಿ ಶಾಲೆ ಶೀಘ್ರದಲ್ಲೇ ಆರಂಭಿಸಲಾಗುವುದು. ದೇವನಹಳ್ಳಿ ತಾಲ್ಲೂಕಿನ ಗೋಕರೆ ಬಳಿಯ ವಾಲ್ಮೀಕಿ ಭವನದ ಬಾಕಿ ಉಳಿದಿರುವ ಕಾಮಗಾರಿಗೆ 1 ಕೋಟಿ ರೂಗಳ ಅನುದಾನ ಬೇಕಿದ್ದು, ತಕ್ಷಣ 50 ಲಕ್ಷ ರೂಗಳ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ವಿಜಯಪುರದಲ್ಲಿ ವಾಲ್ಮೀಕಿ ಬಾಲಕಿಯರ ವಸತಿ ಶಾಲೆ ನಿರ್ಮಿಸಲು, ವಾಲ್ಮೀಕಿ ಸಂಶೋಧನಾ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಶೀಘ್ರದಲ್ಲೇ ಅನುದಾನವನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಹಾಗೂ ಸಮಾಜಕ್ಕೆ ಕೊಡುಗೆ ಕುರಿತು ವಿಶೇಷ ಉಪನ್ಯಾಸವನ್ನು ತಿಮ್ಮೇಶ ಪ್ರಭು ಅವರು ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರು ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನದ ವರೆಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರ ಮೆರವಣಿಗೆ ಜರುಗಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್, ದೇವನಹಳ್ಳಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಗನ್ನಾಥ, ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪಾಂಡುರಂಗ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ , ತಾಲೂಕು ಪಂಚಾಯಿತಿ ಇಒ ಶ್ರೀನಾಥಗೌಡ, ದೇವನಹಳ್ಳಿ ತಾಲೂಕು ಸಮುದಾಯದ ಅಧ್ಯಕ್ಷರಾದ ಜಿ.ನಾಗೇಶ್ ಬಾಬು ಹಾಗೂ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಮುದಾಯದ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧಾ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ…

2 hours ago

ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು…

10 hours ago

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ…

20 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ನೂತನ‌ ಜಿಲ್ಲಾಧಿಕಾರಿ ಯಾರು ಗೊತ್ತಾ….?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದಾರೆ. ಎ.ಬಿ.…

21 hours ago

ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ ಸಂಪನ್ನ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿವರ್ಷದಂತೆ ಈ…

1 day ago

ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು…

1 day ago