ದೇವನಹಳ್ಳಿ ತಾಲ್ಲೂಕಿನ ಹುರುಳುಗುರ್ಕಿ ಬಳಿ ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಜಾಗ ಗುರ್ತಿಸಲಾಗಿದ್ದು ಜಾಗಕ್ಕೆ ಕಂಪೌಂಡ್ ನಿರ್ಮಾಸಲು ಶಾಸಕರ ನಿಧಿಯಿಂದ 10 ಲಕ್ಷ ರೂ. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.
ದೇವನಹಳ್ಳಿ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ‘ಶ್ರೀ ಮಹರ್ಷಿ ವಾಲ್ಮೀಕಿ’ರವರ ಜಯಂತ್ಯೋತ್ಸವ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀ ಮಹರ್ಷಿ ವಾಲ್ಮೀಕಿ ರವರು ಮಹಾನ್ ವ್ಯಕ್ತಿ, ಕಾಲಜ್ಞಾನಿ. ಅವರು ನಡೆದ ಹಾದಿ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಬೇಕು. ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಎಂದೆಂದಿಗೂ ಸಾರ್ವಕಾಲಿಕ. ಪ್ರತಿಯೊಬ್ಬರೂ ವಾಲ್ಮೀಕಿಯವರ ಆದರ್ಶ ಜೀವನವನ್ನು ತಮ್ಮ ಬದುಕಿನಲ್ಲಿ ರೂಡಿಸಿಕೊಂಡು ನಡೆಯಬೇಕಿದೆ ಎಂದರು.
ನಾನು ಲೋಕಸಭಾ ಸದಸ್ಯನಾಗಿದ್ದಾಗ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 4 ವಾಲ್ಮೀಕಿ ವಸತಿ ಶಾಲೆಗಳನ್ನು ಆರಂಭಿಸಿದೆ. ಇದರಿಂದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆ ಅಲಂಕರಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.
ರಾಜ್ಯದ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ. ಹೆಚ್ಚಿನ ಒತ್ತು ನೀಡುತ್ತಿದೆ. ವಾಲ್ಮೀಕಿ ವಸತಿ ಶಾಲೆಗಳು ಆರಂಭಿಸುವ ಮೂಲಕ ಗುಣಮಟ್ಟದ ಶಿಕ್ಷಣದ ಜತೆಗೆ ಮಕ್ಕಳ ಸರ್ವೋತೋಮುಖ ಅಭಿವೃದ್ಧಿ ಮಾಡುವ ಕನಸು ಕಂಡಿದ್ದೇವೆ. ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಬಾಲಕಿಯರ ವಸತಿ ಶಾಲೆ ಶೀಘ್ರದಲ್ಲೇ ಆರಂಭಿಸಲಾಗುವುದು. ದೇವನಹಳ್ಳಿ ತಾಲ್ಲೂಕಿನ ಗೋಕರೆ ಬಳಿಯ ವಾಲ್ಮೀಕಿ ಭವನದ ಬಾಕಿ ಉಳಿದಿರುವ ಕಾಮಗಾರಿಗೆ 1 ಕೋಟಿ ರೂಗಳ ಅನುದಾನ ಬೇಕಿದ್ದು, ತಕ್ಷಣ 50 ಲಕ್ಷ ರೂಗಳ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ವಿಜಯಪುರದಲ್ಲಿ ವಾಲ್ಮೀಕಿ ಬಾಲಕಿಯರ ವಸತಿ ಶಾಲೆ ನಿರ್ಮಿಸಲು, ವಾಲ್ಮೀಕಿ ಸಂಶೋಧನಾ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಶೀಘ್ರದಲ್ಲೇ ಅನುದಾನವನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಹಾಗೂ ಸಮಾಜಕ್ಕೆ ಕೊಡುಗೆ ಕುರಿತು ವಿಶೇಷ ಉಪನ್ಯಾಸವನ್ನು ತಿಮ್ಮೇಶ ಪ್ರಭು ಅವರು ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನದ ವರೆಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರ ಮೆರವಣಿಗೆ ಜರುಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್, ದೇವನಹಳ್ಳಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಗನ್ನಾಥ, ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪಾಂಡುರಂಗ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ , ತಾಲೂಕು ಪಂಚಾಯಿತಿ ಇಒ ಶ್ರೀನಾಥಗೌಡ, ದೇವನಹಳ್ಳಿ ತಾಲೂಕು ಸಮುದಾಯದ ಅಧ್ಯಕ್ಷರಾದ ಜಿ.ನಾಗೇಶ್ ಬಾಬು ಹಾಗೂ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಮುದಾಯದ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…