ವಾಲ್ಮಿಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

ದೇವನಹಳ್ಳಿ ತಾಲ್ಲೂಕಿನ ಹುರುಳುಗುರ್ಕಿ ಬಳಿ ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಜಾಗ ಗುರ್ತಿಸಲಾಗಿದ್ದು ಜಾಗಕ್ಕೆ ಕಂಪೌಂಡ್ ನಿರ್ಮಾಸಲು ಶಾಸಕರ ನಿಧಿಯಿಂದ 10 ಲಕ್ಷ ರೂ. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ‘ಶ್ರೀ ಮಹರ್ಷಿ ವಾಲ್ಮೀಕಿ’ರವರ ಜಯಂತ್ಯೋತ್ಸವ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ಮಹರ್ಷಿ ವಾಲ್ಮೀಕಿ ರವರು ಮಹಾನ್ ವ್ಯಕ್ತಿ, ಕಾಲಜ್ಞಾನಿ. ಅವರು ನಡೆದ ಹಾದಿ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಬೇಕು. ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಎಂದೆಂದಿಗೂ ಸಾರ್ವಕಾಲಿಕ. ಪ್ರತಿಯೊಬ್ಬರೂ ವಾಲ್ಮೀಕಿಯವರ ಆದರ್ಶ ಜೀವನವನ್ನು ತಮ್ಮ ಬದುಕಿನಲ್ಲಿ ರೂಡಿಸಿಕೊಂಡು ನಡೆಯಬೇಕಿದೆ ಎಂದರು.

ನಾನು ಲೋಕಸಭಾ ಸದಸ್ಯನಾಗಿದ್ದಾಗ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 4 ವಾಲ್ಮೀಕಿ ವಸತಿ ಶಾಲೆಗಳನ್ನು ಆರಂಭಿಸಿದೆ. ಇದರಿಂದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆ ಅಲಂಕರಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ರಾಜ್ಯದ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ. ಹೆಚ್ಚಿನ ಒತ್ತು ನೀಡುತ್ತಿದೆ. ವಾಲ್ಮೀಕಿ ವಸತಿ ಶಾಲೆಗಳು ಆರಂಭಿಸುವ ಮೂಲಕ ಗುಣಮಟ್ಟದ ಶಿಕ್ಷಣದ ಜತೆಗೆ ಮಕ್ಕಳ ಸರ್ವೋತೋಮುಖ ಅಭಿವೃದ್ಧಿ ಮಾಡುವ ಕನಸು ಕಂಡಿದ್ದೇವೆ. ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಬಾಲಕಿಯರ ವಸತಿ ಶಾಲೆ ಶೀಘ್ರದಲ್ಲೇ ಆರಂಭಿಸಲಾಗುವುದು. ದೇವನಹಳ್ಳಿ ತಾಲ್ಲೂಕಿನ ಗೋಕರೆ ಬಳಿಯ ವಾಲ್ಮೀಕಿ ಭವನದ ಬಾಕಿ ಉಳಿದಿರುವ ಕಾಮಗಾರಿಗೆ 1 ಕೋಟಿ ರೂಗಳ ಅನುದಾನ ಬೇಕಿದ್ದು, ತಕ್ಷಣ 50 ಲಕ್ಷ ರೂಗಳ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ವಿಜಯಪುರದಲ್ಲಿ ವಾಲ್ಮೀಕಿ ಬಾಲಕಿಯರ ವಸತಿ ಶಾಲೆ ನಿರ್ಮಿಸಲು, ವಾಲ್ಮೀಕಿ ಸಂಶೋಧನಾ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಶೀಘ್ರದಲ್ಲೇ ಅನುದಾನವನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಹಾಗೂ ಸಮಾಜಕ್ಕೆ ಕೊಡುಗೆ ಕುರಿತು ವಿಶೇಷ ಉಪನ್ಯಾಸವನ್ನು ತಿಮ್ಮೇಶ ಪ್ರಭು ಅವರು ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರು ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನದ ವರೆಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರ ಮೆರವಣಿಗೆ ಜರುಗಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್, ದೇವನಹಳ್ಳಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಗನ್ನಾಥ, ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪಾಂಡುರಂಗ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ , ತಾಲೂಕು ಪಂಚಾಯಿತಿ ಇಒ ಶ್ರೀನಾಥಗೌಡ, ದೇವನಹಳ್ಳಿ ತಾಲೂಕು ಸಮುದಾಯದ ಅಧ್ಯಕ್ಷರಾದ ಜಿ.ನಾಗೇಶ್ ಬಾಬು ಹಾಗೂ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಮುದಾಯದ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

14 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

14 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

16 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

16 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

23 hours ago