ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಮನವಿ

ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವರಾದ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಶಾಸಕರು ಮತ್ತು ಸಮುದಾಯದ ಮುಖಂಡರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನ ಭೇಟಿಯಾಗಿ, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಮಾಡಿದರು.

ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ಅನುದಾನದಲ್ಲಿ 50 ಕೋಟಿಯನ್ನು ಎಸ್ ಐ ಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.

ಪ್ರಕರಣವು ಪೂರ್ತಿ ಇತ್ಯರ್ಥ ಆಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕರಾದ ಕಂಪ್ಲಿ ಗಣೇಶ್, ರಘುಮೂರ್ತಿ, ಕೋನಾರೆಡ್ಡಿ, ಸಮುದಾಯದ ಮುಖಂಡರಾದ ನಿವೃತ್ತ ಕೆಎಎಸ್ ಅಧಿಕಾರಿ ಮೃತ್ಯುಂಜಯಪ್ಪ ಸೇರಿ ಸಮಾಜದ ಹಲವು ಹಿರಿಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ)…

5 hours ago

ರೈತನ ಬಾಳೆ ತೋಟ ಮಾರಣಹೋಮ: ಕಿಡಿಗೇಡಿಗಳ ಕಿಡಿಗೇಡಿತನಕ್ಕೆ ಬೆಳೆದು ನಿಂತಿದ್ದ ಬಾಳೆ ಗಿಡಗಳು ನಾಶ: ಸಂಕಷ್ಟದಲ್ಲಿ ರೈತ

ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು…

5 hours ago

ಕುಡಿಯುವ ನೀರಿನ ಸಮಸ್ಯೆ ಬರದಂತೆ ಮುಂಜಾಗ್ರತೆ ವಹಿಸಿ- ಬಾಕಿ ಇರುವ ತೆರಿಗೆಯನ್ನು ಶೀಘ್ರ ವಸೂಲಾತಿ ಮಾಡಿ-ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ರಹೀಂ ಖಾನ್

‘ಸರ್ಕಾರದಿಂದ ಬಿಡುಗಡೆಯಾದ ಅನುದಾನ ಆಯಾ ಆರ್ಥಿಕ ವರ್ಷದಲ್ಲೇ ಬಳಕೆ ಮಾಡಬೇಕು ಅಮೃತ್ ನಗರೋತ್ಥಾನ- 04 ರಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ…

5 hours ago

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಪೂರ್ಣ; 81.94.583 ರೂ. ಸಂಗ್ರಹ

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಶುಕ್ರವಾರ ಹುಂಡಿ ಕಾಣಿಕೆ ಎಣಿಕೆ ಕಾರ್ಯ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ…

7 hours ago

ಇಂದಿನಿಂದ ದೊಡ್ಡಬಳ್ಳಾಪುರ ರಾಗಿ ಖರೀದಿ ಕೇಂದ್ರದಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಆರಂಭ

2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿಸುವ ಕಾರ್ಯ ದೊಡ್ಡಬಳ್ಳಾಪುರದ ಎಂಪಿಎಂಸಿ ಆವರಣದಲ್ಲಿರುವ ರಾಗಿ…

8 hours ago