ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವರಾದ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಶಾಸಕರು ಮತ್ತು ಸಮುದಾಯದ ಮುಖಂಡರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನ ಭೇಟಿಯಾಗಿ, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಮಾಡಿದರು.
ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ಅನುದಾನದಲ್ಲಿ 50 ಕೋಟಿಯನ್ನು ಎಸ್ ಐ ಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.
ಪ್ರಕರಣವು ಪೂರ್ತಿ ಇತ್ಯರ್ಥ ಆಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕರಾದ ಕಂಪ್ಲಿ ಗಣೇಶ್, ರಘುಮೂರ್ತಿ, ಕೋನಾರೆಡ್ಡಿ, ಸಮುದಾಯದ ಮುಖಂಡರಾದ ನಿವೃತ್ತ ಕೆಎಎಸ್ ಅಧಿಕಾರಿ ಮೃತ್ಯುಂಜಯಪ್ಪ ಸೇರಿ ಸಮಾಜದ ಹಲವು ಹಿರಿಯರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…