ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವರಾದ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಶಾಸಕರು ಮತ್ತು ಸಮುದಾಯದ ಮುಖಂಡರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನ ಭೇಟಿಯಾಗಿ, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಮಾಡಿದರು.
ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ಅನುದಾನದಲ್ಲಿ 50 ಕೋಟಿಯನ್ನು ಎಸ್ ಐ ಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.
ಪ್ರಕರಣವು ಪೂರ್ತಿ ಇತ್ಯರ್ಥ ಆಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕರಾದ ಕಂಪ್ಲಿ ಗಣೇಶ್, ರಘುಮೂರ್ತಿ, ಕೋನಾರೆಡ್ಡಿ, ಸಮುದಾಯದ ಮುಖಂಡರಾದ ನಿವೃತ್ತ ಕೆಎಎಸ್ ಅಧಿಕಾರಿ ಮೃತ್ಯುಂಜಯಪ್ಪ ಸೇರಿ ಸಮಾಜದ ಹಲವು ಹಿರಿಯರು ಉಪಸ್ಥಿತರಿದ್ದರು.
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…