ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ಮರುಹಂಚಿಕೆ ಮಾಡಲಾಗುವುದು- ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಒದಗಿಸಲಾಗಿದ್ದ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಮರುಹಂಚಿಕೆ ಮಾಡಲಾಗುವುದು. ಜೊತೆಗೆ ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ ಉಂಟಾಗುತ್ತಿರುವ ಗೊಂದಲವನ್ನು ನಿವಾರಣೆ ಮಾಡಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿದ್ದು ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಈ ವೇಳೆ ವಾಲ್ಮೀಕಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಖ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

50 minutes ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 hour ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

4 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

19 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago