ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ವಿಚಾರ: ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಳಕೆ ಆರೋಪ: ‘ಇ.ಡಿ. ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಬಹಿರಂಗ’-ವಿಪಕ್ಷ ನಾಯಕ ಆರ್.ಅಶೋಕ್

ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ, ಹೆಂಡ ಹಂಚಲು ಬಳಕೆಯಾಗಿದೆ ಎಂಬ ಆಘಾತಕಾರಿ ವಿಷಯ ಇ.ಡಿ. ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ ಎಂದು ವಿರೋಧ‌ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ನಿಗಮದ ಹಣವನ್ನ ಮಾಜಿ ಸಚಿವ @BNagendraINC ಅವರು ತಮ್ಮ ಮನೆಯ ಕರೆಂಟ್ ಬಿಲ್ ಕಟ್ಟಲು, ವಾಹನಗಳಿಗೆ ಡೀಸೆಲ್ ತುಂಬಿಸಲು, ಕುಟುಂಬ ಸದಸ್ಯರಿಗೆ ವಿಮಾನ ಟಿಕೆಟ್ ಖರೀದಿಸಲು, ಮನೆ ಕೆಲಸದವರಿಗೆ ಸಂಬಳ ನೀಡಲೂ ಸಹ ಬಳಸಿದ್ದಾರೆ ಎಂಬ ವಿಷಯವೂ ಬೆಳಕಿಗೆ ಬಂದಿದ್ದು, ಇವುಗಳಿಗೆ ಸಾಕ್ಷಿ ಸಹ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

ದಲಿತರಿಗೆ ಸೇರಬೇಕಾದ ಹಣದಲ್ಲಿ ಇಷ್ಟು ದೊಡ್ಡ ಭ್ರಷ್ಟಚಾರ ನಡೆದಿರುವಾಗ ‘ಆತ್ಮಸಾಕ್ಷಿ’ ಇರುವ ಯಾವ ಮುಖ್ಯಮಂತ್ರಿಯೂ ಒಂದು ಕ್ಷಣವೂ ತಮ್ಮ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.

ಆದರೆ ಆತ್ಮಸಾಕ್ಷಿಗಿಂತ ಅಧಿಕಾರವೇ ದೊಡ್ಡದು, ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ದೊಡ್ಡದು, ಅಂತಃಕರಣಕ್ಕಿಂತ ಅಹಂಕಾರವೇ ದೊಡ್ಡದು ಎನ್ನುವ ಮನಸ್ಥಿತಿ ಇರುವವರು ಈಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಅದೇ ಕನ್ನಡಿಗರ ದೌರ್ಭಾಗ್ಯ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

5 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

6 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

7 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

9 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

16 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

16 hours ago