ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ, ಹೆಂಡ ಹಂಚಲು ಬಳಕೆಯಾಗಿದೆ ಎಂಬ ಆಘಾತಕಾರಿ ವಿಷಯ ಇ.ಡಿ. ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ನಿಗಮದ ಹಣವನ್ನ ಮಾಜಿ ಸಚಿವ @BNagendraINC ಅವರು ತಮ್ಮ ಮನೆಯ ಕರೆಂಟ್ ಬಿಲ್ ಕಟ್ಟಲು, ವಾಹನಗಳಿಗೆ ಡೀಸೆಲ್ ತುಂಬಿಸಲು, ಕುಟುಂಬ ಸದಸ್ಯರಿಗೆ ವಿಮಾನ ಟಿಕೆಟ್ ಖರೀದಿಸಲು, ಮನೆ ಕೆಲಸದವರಿಗೆ ಸಂಬಳ ನೀಡಲೂ ಸಹ ಬಳಸಿದ್ದಾರೆ ಎಂಬ ವಿಷಯವೂ ಬೆಳಕಿಗೆ ಬಂದಿದ್ದು, ಇವುಗಳಿಗೆ ಸಾಕ್ಷಿ ಸಹ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ದಲಿತರಿಗೆ ಸೇರಬೇಕಾದ ಹಣದಲ್ಲಿ ಇಷ್ಟು ದೊಡ್ಡ ಭ್ರಷ್ಟಚಾರ ನಡೆದಿರುವಾಗ ‘ಆತ್ಮಸಾಕ್ಷಿ’ ಇರುವ ಯಾವ ಮುಖ್ಯಮಂತ್ರಿಯೂ ಒಂದು ಕ್ಷಣವೂ ತಮ್ಮ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.
ಆದರೆ ಆತ್ಮಸಾಕ್ಷಿಗಿಂತ ಅಧಿಕಾರವೇ ದೊಡ್ಡದು, ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ದೊಡ್ಡದು, ಅಂತಃಕರಣಕ್ಕಿಂತ ಅಹಂಕಾರವೇ ದೊಡ್ಡದು ಎನ್ನುವ ಮನಸ್ಥಿತಿ ಇರುವವರು ಈಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಅದೇ ಕನ್ನಡಿಗರ ದೌರ್ಭಾಗ್ಯ ಎಂದು ತಿಳಿಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…