ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ, ಹೆಂಡ ಹಂಚಲು ಬಳಕೆಯಾಗಿದೆ ಎಂಬ ಆಘಾತಕಾರಿ ವಿಷಯ ಇ.ಡಿ. ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ನಿಗಮದ ಹಣವನ್ನ ಮಾಜಿ ಸಚಿವ @BNagendraINC ಅವರು ತಮ್ಮ ಮನೆಯ ಕರೆಂಟ್ ಬಿಲ್ ಕಟ್ಟಲು, ವಾಹನಗಳಿಗೆ ಡೀಸೆಲ್ ತುಂಬಿಸಲು, ಕುಟುಂಬ ಸದಸ್ಯರಿಗೆ ವಿಮಾನ ಟಿಕೆಟ್ ಖರೀದಿಸಲು, ಮನೆ ಕೆಲಸದವರಿಗೆ ಸಂಬಳ ನೀಡಲೂ ಸಹ ಬಳಸಿದ್ದಾರೆ ಎಂಬ ವಿಷಯವೂ ಬೆಳಕಿಗೆ ಬಂದಿದ್ದು, ಇವುಗಳಿಗೆ ಸಾಕ್ಷಿ ಸಹ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ದಲಿತರಿಗೆ ಸೇರಬೇಕಾದ ಹಣದಲ್ಲಿ ಇಷ್ಟು ದೊಡ್ಡ ಭ್ರಷ್ಟಚಾರ ನಡೆದಿರುವಾಗ ‘ಆತ್ಮಸಾಕ್ಷಿ’ ಇರುವ ಯಾವ ಮುಖ್ಯಮಂತ್ರಿಯೂ ಒಂದು ಕ್ಷಣವೂ ತಮ್ಮ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.
ಆದರೆ ಆತ್ಮಸಾಕ್ಷಿಗಿಂತ ಅಧಿಕಾರವೇ ದೊಡ್ಡದು, ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ದೊಡ್ಡದು, ಅಂತಃಕರಣಕ್ಕಿಂತ ಅಹಂಕಾರವೇ ದೊಡ್ಡದು ಎನ್ನುವ ಮನಸ್ಥಿತಿ ಇರುವವರು ಈಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಅದೇ ಕನ್ನಡಿಗರ ದೌರ್ಭಾಗ್ಯ ಎಂದು ತಿಳಿಸಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…