ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ, ಹೆಂಡ ಹಂಚಲು ಬಳಕೆಯಾಗಿದೆ ಎಂಬ ಆಘಾತಕಾರಿ ವಿಷಯ ಇ.ಡಿ. ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ನಿಗಮದ ಹಣವನ್ನ ಮಾಜಿ ಸಚಿವ @BNagendraINC ಅವರು ತಮ್ಮ ಮನೆಯ ಕರೆಂಟ್ ಬಿಲ್ ಕಟ್ಟಲು, ವಾಹನಗಳಿಗೆ ಡೀಸೆಲ್ ತುಂಬಿಸಲು, ಕುಟುಂಬ ಸದಸ್ಯರಿಗೆ ವಿಮಾನ ಟಿಕೆಟ್ ಖರೀದಿಸಲು, ಮನೆ ಕೆಲಸದವರಿಗೆ ಸಂಬಳ ನೀಡಲೂ ಸಹ ಬಳಸಿದ್ದಾರೆ ಎಂಬ ವಿಷಯವೂ ಬೆಳಕಿಗೆ ಬಂದಿದ್ದು, ಇವುಗಳಿಗೆ ಸಾಕ್ಷಿ ಸಹ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ದಲಿತರಿಗೆ ಸೇರಬೇಕಾದ ಹಣದಲ್ಲಿ ಇಷ್ಟು ದೊಡ್ಡ ಭ್ರಷ್ಟಚಾರ ನಡೆದಿರುವಾಗ ‘ಆತ್ಮಸಾಕ್ಷಿ’ ಇರುವ ಯಾವ ಮುಖ್ಯಮಂತ್ರಿಯೂ ಒಂದು ಕ್ಷಣವೂ ತಮ್ಮ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.
ಆದರೆ ಆತ್ಮಸಾಕ್ಷಿಗಿಂತ ಅಧಿಕಾರವೇ ದೊಡ್ಡದು, ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ದೊಡ್ಡದು, ಅಂತಃಕರಣಕ್ಕಿಂತ ಅಹಂಕಾರವೇ ದೊಡ್ಡದು ಎನ್ನುವ ಮನಸ್ಥಿತಿ ಇರುವವರು ಈಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಅದೇ ಕನ್ನಡಿಗರ ದೌರ್ಭಾಗ್ಯ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…