ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ, ಹೆಂಡ ಹಂಚಲು ಬಳಕೆಯಾಗಿದೆ ಎಂಬ ಆಘಾತಕಾರಿ ವಿಷಯ ಇ.ಡಿ. ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ನಿಗಮದ ಹಣವನ್ನ ಮಾಜಿ ಸಚಿವ @BNagendraINC ಅವರು ತಮ್ಮ ಮನೆಯ ಕರೆಂಟ್ ಬಿಲ್ ಕಟ್ಟಲು, ವಾಹನಗಳಿಗೆ ಡೀಸೆಲ್ ತುಂಬಿಸಲು, ಕುಟುಂಬ ಸದಸ್ಯರಿಗೆ ವಿಮಾನ ಟಿಕೆಟ್ ಖರೀದಿಸಲು, ಮನೆ ಕೆಲಸದವರಿಗೆ ಸಂಬಳ ನೀಡಲೂ ಸಹ ಬಳಸಿದ್ದಾರೆ ಎಂಬ ವಿಷಯವೂ ಬೆಳಕಿಗೆ ಬಂದಿದ್ದು, ಇವುಗಳಿಗೆ ಸಾಕ್ಷಿ ಸಹ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ದಲಿತರಿಗೆ ಸೇರಬೇಕಾದ ಹಣದಲ್ಲಿ ಇಷ್ಟು ದೊಡ್ಡ ಭ್ರಷ್ಟಚಾರ ನಡೆದಿರುವಾಗ ‘ಆತ್ಮಸಾಕ್ಷಿ’ ಇರುವ ಯಾವ ಮುಖ್ಯಮಂತ್ರಿಯೂ ಒಂದು ಕ್ಷಣವೂ ತಮ್ಮ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.
ಆದರೆ ಆತ್ಮಸಾಕ್ಷಿಗಿಂತ ಅಧಿಕಾರವೇ ದೊಡ್ಡದು, ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ದೊಡ್ಡದು, ಅಂತಃಕರಣಕ್ಕಿಂತ ಅಹಂಕಾರವೇ ದೊಡ್ಡದು ಎನ್ನುವ ಮನಸ್ಥಿತಿ ಇರುವವರು ಈಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಅದೇ ಕನ್ನಡಿಗರ ದೌರ್ಭಾಗ್ಯ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…