Categories: ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಟ್ಟಿದ್ದ ಹಣದಲ್ಲಿ ಒಂದು ಪೈಸೆ ಕೂಡ ಕಡಿಮೆ ಆಗದಂತೆ ಕೊಡಲಾಗುವುದು- ಸಿಎಂ‌ ಸಿಎಂ ಸಿದ್ದರಾಮಯ್ಯ

ವಾಲ್ಮೀಕಿಯವರು ಸಂಸ್ಕೃತದಲ್ಲಿ 20 ಸಾವಿರ ಶ್ಲೋಕಗಳನ್ನು ರಚಿಸಿದ್ದಾರೆ. ಶೂದ್ರ ವರ್ಗದ ಜನ ವಿದ್ಯೆ ಕಲಿಯುವುದೇ ನಿಷಿದ್ಧವಾಗಿದ್ದ ಕಾಲದಲ್ಲಿ ವಿದ್ಯೆ ಕಲಿತು, ಸಂಸ್ಕೃತವನ್ನೂ ಕಲಿತು, ರಾಮಾಯಣ ರಚಿಸಿದ್ದು ಬಹಳ ದೊಡ್ಡ ಹೋರಾಟ ಮತ್ತು ಸಾಧನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ವಾಲ್ಮೀಕಿ ಬೇಡ ಸಮುದಾಯದವರು, ಶಾಕುಂತಲ ಬರೆದ ಕಾಳಿದಾಸರು ಕುರುಬ ಸಮುದಾಯದವರು. ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ನಮ್ಮ ಜೀವನವನ್ನು ರೂಪಿಸಿಕೊಳ್ಖುವ ಶಿಲ್ಪಿ ನಾವೇ. ಆದ್ದರಿಂದ ವಿದ್ಯೆ ಕಲಿಯಲೇಬೇಕು. ಶೂದ್ರ ಜಾತಿಯ ಕನಕದಾಸರು ದಾಸಶ್ರೇಷ್ಠರಾದರು. ಆದ್ದರಿಂದ ವಿದ್ಯಾವಂತರಾಗಲು ಜಾತಿ ಅಡ್ಡಿ ಬರುವುದಿಲ್ಲ. ಮೇಲ್ವರ್ಗದವರಿಗೆ ಮಾತ್ರ ವಿದ್ಯೆ ಸಿದ್ಧಿಸುತ್ತದೆ ಎನ್ನುವುದನ್ನು ನಮ್ಮಲ್ಲಿ ಬಿತ್ತಿದ್ದಾರೆ. ಇದು ತಪ್ಪು ಎಂದು ತಿಳಿಸಿದರು.

ಚನ್ನಪ್ಪಯ್ಯ ಎನ್ನುವ ಮೇಲ್ವರ್ಗದವರ ಮಾತು ಕೇಳಿ, ಕುರುಬರೆಲ್ಲಾ ಲಾಯರ್ ಓದೋಕೆ ಆಗಲ್ಲ ಎಂದು ನನ್ನಪ್ಪ ಹೇಳುತ್ತಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಓದಿ ಲಾಯರ್ ಆದೆ. ಮುಖ್ಯಮಂತ್ರಿಯೂ ಆದೆ ಎಂದರು.

ಇಂದು ನಾವು ಆಚರಿಸುತ್ತಿರುವ ಪ್ರಜಾಪ್ರಭುತ್ವಕ್ಕೆ ವಾಲ್ಮೀಕಿ ಅವರು ಅವತ್ತೇ ಅಡಿಪಾಯ ಹಾಕಿದ್ದರು. ಮಹಾತ್ಮ ಗಾಂಧಿಯವರು ಹೇಳುವ ರಾಮರಾಜ್ಯವನ್ನು ವಾಲ್ಮೀಕಿ ಅವರು ರಾಮಾಯಣದಲ್ಲೇ ಚಿತ್ರಿಸಿದ್ದಾರೆ. ಆದರೂ ವಾಲ್ಮೀಕಿ ಅವರು ದರೋಡೆಕೋರ ಆಗಿದ್ದರು ಎಂದೆಲ್ಲಾ ಸುಳ್ಳು ಕತೆ ಸೃಷ್ಟಿಸಿದ್ದಾರೆ. ಇವೆಲ್ಲಾ ನಂಬೋಕೆ ಹೋಗಬೇಡಿ. ವಾಲ್ಮೀಕಿ ಮಹಾನ್ ಮೇದಾವಿ, ವಿದ್ಯಾವಂತ ಆಗಿದ್ದರು ಎಂದು ಹೇಳಿದರು.

ನಾವು ಈಗಾಗಲೇ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದು ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಯನ್ನೂ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇಂದು ಹೆಚ್.ಡಿ.ಕೋಟೆಯಲ್ಲಿ ₹443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇನೆ. ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು, ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಹಸಿ ಸುಳ್ಳು ಹರಡಿಸುತ್ತಾರೆ. ನಮ್ಮಲ್ಲಿ ಹಣ ಇಲ್ಲದಿದ್ದರೆ ಈ ₹443 ಕೋಟಿ ಎಲ್ಲಿಂದ ಬಂತು? ಯಾವುದಾದರೂ ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ನಿಂತಿದೆಯಾ? ಎಂದು ಪ್ರಶ್ನೆ ಮಾಡಿದರು.

ರಾಜ್ಯದ ಕೋಟಿ ಕೋಟಿ ಫಲಾನುಭವಿಗಳು ನಮ್ಮ ಐದೂ ಗ್ಯಾರಂಟಿ ಯೋಜನೆಗಳ ಫಲವನ್ನು ಪ್ರತೀ ತಿಂಗಳೂ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಗೂ ಹಣ ಇಲ್ಲ ಎಂದು ಸುಳ್ಳು ಹರಡಿಸುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನವನ್ನು ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಇದನ್ನು ದೇಶದ ಬೇರೆ ಯಾವ ಸರ್ಕಾರವೂ ಕೊಟ್ಟಿರಲಿಲ್ಲ ಎಂದು ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಟ್ಟಿದ್ದ ಹಣದಲ್ಲಿ ಒಂದು ಪೈಸೆ ಕೂಡ ಕಡಿಮೆ ಆಗದಂತೆ ಕೊಡಲಾಗುವುದು. ಪರಿಶಿಷ್ಠ ವರ್ಗದ ಮಂತ್ರಿಯಾಗಿದ್ದ ನಾಗೇಂದ್ರ ಅವರ ಮೇಲೂ ಸುಳ್ಳು ಕೇಸು ಹಾಕಿದ್ದರು. ಈಗ ನಾಗೇಂದ್ರ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ. ಉಪ ಚುನಾವಣೆ ಮುಗಿದ ಬಳಿಕ ಈ ಬಗ್ಗೆ ಒಳ್ಳೆ ತೀರ್ಮಾನ ಮಾಡುತ್ತೇನೆ ಎಂದರು.

ನಮ್ಮ ಗ್ಯಾರಂಟಿಗಳಿಂದ ಅನುಕೂಲ ಪಡೆದವರು ನಮಗೆ ಮತ ಕೊಡಲಿ, ಬಿಡಲಿ ಆದರೆ ನಾವು ಬಡವರ ಕಲ್ಯಾಣಕ್ಕೆ ಕೆಲಸ ಮಾಡುವುದನ್ನು ಮಾತ್ರ ನಿಲ್ಲಿಸುವುದಿಲ್ಲ. ಬಡವರ ಪರ ಕೆಲಸ ಮಾಡುವುದು ನಮ್ಮ ಬದ್ಧತೆ ಎಂದು ಹೇಳಿದರು.

ವಾಲ್ಮೀಕಿ ಸಂಘದ ಬೇಡಿಕೆಯಂತೆ ಹೆಚ್.ಡಿ.ಕೋಟೆಯಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ 2 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು. ಈ ಸಮುದಾಯದ ಜೊತೆ ನಮ್ಮ ಸರ್ಕಾರ ಇರಲಿದೆ ಎಂದರು.

Ramesh Babu

Journalist

Recent Posts

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…

2 minutes ago

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ…

8 minutes ago

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

4 hours ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

6 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

9 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

12 hours ago