Categories: ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಟ್ಟಿದ್ದ ಹಣದಲ್ಲಿ ಒಂದು ಪೈಸೆ ಕೂಡ ಕಡಿಮೆ ಆಗದಂತೆ ಕೊಡಲಾಗುವುದು- ಸಿಎಂ‌ ಸಿಎಂ ಸಿದ್ದರಾಮಯ್ಯ

ವಾಲ್ಮೀಕಿಯವರು ಸಂಸ್ಕೃತದಲ್ಲಿ 20 ಸಾವಿರ ಶ್ಲೋಕಗಳನ್ನು ರಚಿಸಿದ್ದಾರೆ. ಶೂದ್ರ ವರ್ಗದ ಜನ ವಿದ್ಯೆ ಕಲಿಯುವುದೇ ನಿಷಿದ್ಧವಾಗಿದ್ದ ಕಾಲದಲ್ಲಿ ವಿದ್ಯೆ ಕಲಿತು, ಸಂಸ್ಕೃತವನ್ನೂ ಕಲಿತು, ರಾಮಾಯಣ ರಚಿಸಿದ್ದು ಬಹಳ ದೊಡ್ಡ ಹೋರಾಟ ಮತ್ತು ಸಾಧನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ವಾಲ್ಮೀಕಿ ಬೇಡ ಸಮುದಾಯದವರು, ಶಾಕುಂತಲ ಬರೆದ ಕಾಳಿದಾಸರು ಕುರುಬ ಸಮುದಾಯದವರು. ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ನಮ್ಮ ಜೀವನವನ್ನು ರೂಪಿಸಿಕೊಳ್ಖುವ ಶಿಲ್ಪಿ ನಾವೇ. ಆದ್ದರಿಂದ ವಿದ್ಯೆ ಕಲಿಯಲೇಬೇಕು. ಶೂದ್ರ ಜಾತಿಯ ಕನಕದಾಸರು ದಾಸಶ್ರೇಷ್ಠರಾದರು. ಆದ್ದರಿಂದ ವಿದ್ಯಾವಂತರಾಗಲು ಜಾತಿ ಅಡ್ಡಿ ಬರುವುದಿಲ್ಲ. ಮೇಲ್ವರ್ಗದವರಿಗೆ ಮಾತ್ರ ವಿದ್ಯೆ ಸಿದ್ಧಿಸುತ್ತದೆ ಎನ್ನುವುದನ್ನು ನಮ್ಮಲ್ಲಿ ಬಿತ್ತಿದ್ದಾರೆ. ಇದು ತಪ್ಪು ಎಂದು ತಿಳಿಸಿದರು.

ಚನ್ನಪ್ಪಯ್ಯ ಎನ್ನುವ ಮೇಲ್ವರ್ಗದವರ ಮಾತು ಕೇಳಿ, ಕುರುಬರೆಲ್ಲಾ ಲಾಯರ್ ಓದೋಕೆ ಆಗಲ್ಲ ಎಂದು ನನ್ನಪ್ಪ ಹೇಳುತ್ತಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಓದಿ ಲಾಯರ್ ಆದೆ. ಮುಖ್ಯಮಂತ್ರಿಯೂ ಆದೆ ಎಂದರು.

ಇಂದು ನಾವು ಆಚರಿಸುತ್ತಿರುವ ಪ್ರಜಾಪ್ರಭುತ್ವಕ್ಕೆ ವಾಲ್ಮೀಕಿ ಅವರು ಅವತ್ತೇ ಅಡಿಪಾಯ ಹಾಕಿದ್ದರು. ಮಹಾತ್ಮ ಗಾಂಧಿಯವರು ಹೇಳುವ ರಾಮರಾಜ್ಯವನ್ನು ವಾಲ್ಮೀಕಿ ಅವರು ರಾಮಾಯಣದಲ್ಲೇ ಚಿತ್ರಿಸಿದ್ದಾರೆ. ಆದರೂ ವಾಲ್ಮೀಕಿ ಅವರು ದರೋಡೆಕೋರ ಆಗಿದ್ದರು ಎಂದೆಲ್ಲಾ ಸುಳ್ಳು ಕತೆ ಸೃಷ್ಟಿಸಿದ್ದಾರೆ. ಇವೆಲ್ಲಾ ನಂಬೋಕೆ ಹೋಗಬೇಡಿ. ವಾಲ್ಮೀಕಿ ಮಹಾನ್ ಮೇದಾವಿ, ವಿದ್ಯಾವಂತ ಆಗಿದ್ದರು ಎಂದು ಹೇಳಿದರು.

ನಾವು ಈಗಾಗಲೇ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದು ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಯನ್ನೂ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇಂದು ಹೆಚ್.ಡಿ.ಕೋಟೆಯಲ್ಲಿ ₹443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇನೆ. ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು, ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಹಸಿ ಸುಳ್ಳು ಹರಡಿಸುತ್ತಾರೆ. ನಮ್ಮಲ್ಲಿ ಹಣ ಇಲ್ಲದಿದ್ದರೆ ಈ ₹443 ಕೋಟಿ ಎಲ್ಲಿಂದ ಬಂತು? ಯಾವುದಾದರೂ ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ನಿಂತಿದೆಯಾ? ಎಂದು ಪ್ರಶ್ನೆ ಮಾಡಿದರು.

ರಾಜ್ಯದ ಕೋಟಿ ಕೋಟಿ ಫಲಾನುಭವಿಗಳು ನಮ್ಮ ಐದೂ ಗ್ಯಾರಂಟಿ ಯೋಜನೆಗಳ ಫಲವನ್ನು ಪ್ರತೀ ತಿಂಗಳೂ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಗೂ ಹಣ ಇಲ್ಲ ಎಂದು ಸುಳ್ಳು ಹರಡಿಸುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನವನ್ನು ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಇದನ್ನು ದೇಶದ ಬೇರೆ ಯಾವ ಸರ್ಕಾರವೂ ಕೊಟ್ಟಿರಲಿಲ್ಲ ಎಂದು ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಟ್ಟಿದ್ದ ಹಣದಲ್ಲಿ ಒಂದು ಪೈಸೆ ಕೂಡ ಕಡಿಮೆ ಆಗದಂತೆ ಕೊಡಲಾಗುವುದು. ಪರಿಶಿಷ್ಠ ವರ್ಗದ ಮಂತ್ರಿಯಾಗಿದ್ದ ನಾಗೇಂದ್ರ ಅವರ ಮೇಲೂ ಸುಳ್ಳು ಕೇಸು ಹಾಕಿದ್ದರು. ಈಗ ನಾಗೇಂದ್ರ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ. ಉಪ ಚುನಾವಣೆ ಮುಗಿದ ಬಳಿಕ ಈ ಬಗ್ಗೆ ಒಳ್ಳೆ ತೀರ್ಮಾನ ಮಾಡುತ್ತೇನೆ ಎಂದರು.

ನಮ್ಮ ಗ್ಯಾರಂಟಿಗಳಿಂದ ಅನುಕೂಲ ಪಡೆದವರು ನಮಗೆ ಮತ ಕೊಡಲಿ, ಬಿಡಲಿ ಆದರೆ ನಾವು ಬಡವರ ಕಲ್ಯಾಣಕ್ಕೆ ಕೆಲಸ ಮಾಡುವುದನ್ನು ಮಾತ್ರ ನಿಲ್ಲಿಸುವುದಿಲ್ಲ. ಬಡವರ ಪರ ಕೆಲಸ ಮಾಡುವುದು ನಮ್ಮ ಬದ್ಧತೆ ಎಂದು ಹೇಳಿದರು.

ವಾಲ್ಮೀಕಿ ಸಂಘದ ಬೇಡಿಕೆಯಂತೆ ಹೆಚ್.ಡಿ.ಕೋಟೆಯಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ 2 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು. ಈ ಸಮುದಾಯದ ಜೊತೆ ನಮ್ಮ ಸರ್ಕಾರ ಇರಲಿದೆ ಎಂದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

4 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

17 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

17 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

20 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

21 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago