Categories: ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಟ್ಟಿದ್ದ ಹಣದಲ್ಲಿ ಒಂದು ಪೈಸೆ ಕೂಡ ಕಡಿಮೆ ಆಗದಂತೆ ಕೊಡಲಾಗುವುದು- ಸಿಎಂ‌ ಸಿಎಂ ಸಿದ್ದರಾಮಯ್ಯ

ವಾಲ್ಮೀಕಿಯವರು ಸಂಸ್ಕೃತದಲ್ಲಿ 20 ಸಾವಿರ ಶ್ಲೋಕಗಳನ್ನು ರಚಿಸಿದ್ದಾರೆ. ಶೂದ್ರ ವರ್ಗದ ಜನ ವಿದ್ಯೆ ಕಲಿಯುವುದೇ ನಿಷಿದ್ಧವಾಗಿದ್ದ ಕಾಲದಲ್ಲಿ ವಿದ್ಯೆ ಕಲಿತು, ಸಂಸ್ಕೃತವನ್ನೂ ಕಲಿತು, ರಾಮಾಯಣ ರಚಿಸಿದ್ದು ಬಹಳ ದೊಡ್ಡ ಹೋರಾಟ ಮತ್ತು ಸಾಧನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ವಾಲ್ಮೀಕಿ ಬೇಡ ಸಮುದಾಯದವರು, ಶಾಕುಂತಲ ಬರೆದ ಕಾಳಿದಾಸರು ಕುರುಬ ಸಮುದಾಯದವರು. ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ನಮ್ಮ ಜೀವನವನ್ನು ರೂಪಿಸಿಕೊಳ್ಖುವ ಶಿಲ್ಪಿ ನಾವೇ. ಆದ್ದರಿಂದ ವಿದ್ಯೆ ಕಲಿಯಲೇಬೇಕು. ಶೂದ್ರ ಜಾತಿಯ ಕನಕದಾಸರು ದಾಸಶ್ರೇಷ್ಠರಾದರು. ಆದ್ದರಿಂದ ವಿದ್ಯಾವಂತರಾಗಲು ಜಾತಿ ಅಡ್ಡಿ ಬರುವುದಿಲ್ಲ. ಮೇಲ್ವರ್ಗದವರಿಗೆ ಮಾತ್ರ ವಿದ್ಯೆ ಸಿದ್ಧಿಸುತ್ತದೆ ಎನ್ನುವುದನ್ನು ನಮ್ಮಲ್ಲಿ ಬಿತ್ತಿದ್ದಾರೆ. ಇದು ತಪ್ಪು ಎಂದು ತಿಳಿಸಿದರು.

ಚನ್ನಪ್ಪಯ್ಯ ಎನ್ನುವ ಮೇಲ್ವರ್ಗದವರ ಮಾತು ಕೇಳಿ, ಕುರುಬರೆಲ್ಲಾ ಲಾಯರ್ ಓದೋಕೆ ಆಗಲ್ಲ ಎಂದು ನನ್ನಪ್ಪ ಹೇಳುತ್ತಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಓದಿ ಲಾಯರ್ ಆದೆ. ಮುಖ್ಯಮಂತ್ರಿಯೂ ಆದೆ ಎಂದರು.

ಇಂದು ನಾವು ಆಚರಿಸುತ್ತಿರುವ ಪ್ರಜಾಪ್ರಭುತ್ವಕ್ಕೆ ವಾಲ್ಮೀಕಿ ಅವರು ಅವತ್ತೇ ಅಡಿಪಾಯ ಹಾಕಿದ್ದರು. ಮಹಾತ್ಮ ಗಾಂಧಿಯವರು ಹೇಳುವ ರಾಮರಾಜ್ಯವನ್ನು ವಾಲ್ಮೀಕಿ ಅವರು ರಾಮಾಯಣದಲ್ಲೇ ಚಿತ್ರಿಸಿದ್ದಾರೆ. ಆದರೂ ವಾಲ್ಮೀಕಿ ಅವರು ದರೋಡೆಕೋರ ಆಗಿದ್ದರು ಎಂದೆಲ್ಲಾ ಸುಳ್ಳು ಕತೆ ಸೃಷ್ಟಿಸಿದ್ದಾರೆ. ಇವೆಲ್ಲಾ ನಂಬೋಕೆ ಹೋಗಬೇಡಿ. ವಾಲ್ಮೀಕಿ ಮಹಾನ್ ಮೇದಾವಿ, ವಿದ್ಯಾವಂತ ಆಗಿದ್ದರು ಎಂದು ಹೇಳಿದರು.

ನಾವು ಈಗಾಗಲೇ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದು ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಯನ್ನೂ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇಂದು ಹೆಚ್.ಡಿ.ಕೋಟೆಯಲ್ಲಿ ₹443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇನೆ. ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು, ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಹಸಿ ಸುಳ್ಳು ಹರಡಿಸುತ್ತಾರೆ. ನಮ್ಮಲ್ಲಿ ಹಣ ಇಲ್ಲದಿದ್ದರೆ ಈ ₹443 ಕೋಟಿ ಎಲ್ಲಿಂದ ಬಂತು? ಯಾವುದಾದರೂ ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ನಿಂತಿದೆಯಾ? ಎಂದು ಪ್ರಶ್ನೆ ಮಾಡಿದರು.

ರಾಜ್ಯದ ಕೋಟಿ ಕೋಟಿ ಫಲಾನುಭವಿಗಳು ನಮ್ಮ ಐದೂ ಗ್ಯಾರಂಟಿ ಯೋಜನೆಗಳ ಫಲವನ್ನು ಪ್ರತೀ ತಿಂಗಳೂ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಗೂ ಹಣ ಇಲ್ಲ ಎಂದು ಸುಳ್ಳು ಹರಡಿಸುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನವನ್ನು ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಇದನ್ನು ದೇಶದ ಬೇರೆ ಯಾವ ಸರ್ಕಾರವೂ ಕೊಟ್ಟಿರಲಿಲ್ಲ ಎಂದು ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಟ್ಟಿದ್ದ ಹಣದಲ್ಲಿ ಒಂದು ಪೈಸೆ ಕೂಡ ಕಡಿಮೆ ಆಗದಂತೆ ಕೊಡಲಾಗುವುದು. ಪರಿಶಿಷ್ಠ ವರ್ಗದ ಮಂತ್ರಿಯಾಗಿದ್ದ ನಾಗೇಂದ್ರ ಅವರ ಮೇಲೂ ಸುಳ್ಳು ಕೇಸು ಹಾಕಿದ್ದರು. ಈಗ ನಾಗೇಂದ್ರ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ. ಉಪ ಚುನಾವಣೆ ಮುಗಿದ ಬಳಿಕ ಈ ಬಗ್ಗೆ ಒಳ್ಳೆ ತೀರ್ಮಾನ ಮಾಡುತ್ತೇನೆ ಎಂದರು.

ನಮ್ಮ ಗ್ಯಾರಂಟಿಗಳಿಂದ ಅನುಕೂಲ ಪಡೆದವರು ನಮಗೆ ಮತ ಕೊಡಲಿ, ಬಿಡಲಿ ಆದರೆ ನಾವು ಬಡವರ ಕಲ್ಯಾಣಕ್ಕೆ ಕೆಲಸ ಮಾಡುವುದನ್ನು ಮಾತ್ರ ನಿಲ್ಲಿಸುವುದಿಲ್ಲ. ಬಡವರ ಪರ ಕೆಲಸ ಮಾಡುವುದು ನಮ್ಮ ಬದ್ಧತೆ ಎಂದು ಹೇಳಿದರು.

ವಾಲ್ಮೀಕಿ ಸಂಘದ ಬೇಡಿಕೆಯಂತೆ ಹೆಚ್.ಡಿ.ಕೋಟೆಯಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ 2 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು. ಈ ಸಮುದಾಯದ ಜೊತೆ ನಮ್ಮ ಸರ್ಕಾರ ಇರಲಿದೆ ಎಂದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

15 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 hours ago