Categories: ಕೋಲಾರ

ವಾಲ್ಮೀಕಿ ಜಾತ್ರಾ ಮಹೋತ್ಸವದ ಯಶಸ್ವಿಗೆ ನಗರದಲ್ಲಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಕೋಲಾರ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜೇನಹಳ್ಳಿಯಲ್ಲಿ ನಡೆಯಲಿರುವ 7 ನೇ ವರ್ಷದ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಗರದ ಕೋಟೆಯ ವಾಲ್ಮೀಕಿ ಭವನದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಲಾಯಿತು.

ಮುಂದಿನ ವರ್ಷ ಫೆಬ್ರುವರಿ ತಿಂಗಳಿನ 8 ಮತ್ತು 9 ರಂದು ವಾಲ್ಮೀಕಿ ಗುರುಪೀಠದಲ್ಲಿ ಜಾತ್ರೆ ಮಹೋತ್ಸವ ನಡೆಯಲಿದ್ದು ಜಿಲ್ಲೆಯಾದ್ಯಂತ ಸಮುದಾಯದವರು ಪಕ್ಷ, ಜಾತಿ ಭೇದ ಮರೆತು ಎಲ್ಲರೂ ಭಾಗವಹಿಸಬೇಕು ಇದಕ್ಕೆ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಇದೇ ಸಂದರ್ಭದಲ್ಲಿ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಎಂ ಬಾಲಗೋವಿಂದ್, ಹಾಗೂ ಬೈರಂಡಹಳ್ಳಿ ನಾಗೇಶ್ ಅವರನ್ನು ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು

ಸಭೆಯಲ್ಲಿ ನಗರಸಭೆ ಸದಸ್ಯ ಎನ್.ಅಂಬರೀಷ್, ಮುಖಂಡರಾದ ಮಾಲೂರು ಎನ್ ವೆಂಕಟರಾಮ್ , ಕುಡುವನಹಳ್ಳಿ ಆನಂದ್, ನರೇಶ್, ನರಸಿಂಹಪ್ಪ, ಅಶ್ವಥ್, ಕೆ.ಆನಂದ್ ಕುಮಾರ್, ಕಲ್ವಮಂಜಲಿ ರವಿ, ಕಲ್ಲಂಡೂರು ನಾರಾಯಣಸ್ವಾಮಿ, ಬೆಳ್ಳೂರು ತಿರುಮಲೇಶ್, ದಿಂಬ ಚಾಮನಹಳ್ಳಿ ರಾಮಪ್ಪ, ಶಂಕರಪ್ಪ, ಮೇಡಹಾಳ ಮಂಜುನಾಥ್, ನಿವೃತ್ತಿ ಶಿಕ್ಷಕ ನರಸಿಂಹಯ್ಯ, ಐತಾರಸಹಳ್ಳಿ ಶ್ರೀನಿವಾಸ್, ಕೋಟೆ ಮಂಜುಳ ಶ್ರೀನಿವಾಸ್, ಮಧು, ಮುಂತಾದವರು ಇದ್ದರು.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

5 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

7 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

19 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

22 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

1 day ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 day ago