ಕೋಲಾರ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜೇನಹಳ್ಳಿಯಲ್ಲಿ ನಡೆಯಲಿರುವ 7 ನೇ ವರ್ಷದ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಗರದ ಕೋಟೆಯ ವಾಲ್ಮೀಕಿ ಭವನದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಲಾಯಿತು.
ಮುಂದಿನ ವರ್ಷ ಫೆಬ್ರುವರಿ ತಿಂಗಳಿನ 8 ಮತ್ತು 9 ರಂದು ವಾಲ್ಮೀಕಿ ಗುರುಪೀಠದಲ್ಲಿ ಜಾತ್ರೆ ಮಹೋತ್ಸವ ನಡೆಯಲಿದ್ದು ಜಿಲ್ಲೆಯಾದ್ಯಂತ ಸಮುದಾಯದವರು ಪಕ್ಷ, ಜಾತಿ ಭೇದ ಮರೆತು ಎಲ್ಲರೂ ಭಾಗವಹಿಸಬೇಕು ಇದಕ್ಕೆ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಇದೇ ಸಂದರ್ಭದಲ್ಲಿ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಎಂ ಬಾಲಗೋವಿಂದ್, ಹಾಗೂ ಬೈರಂಡಹಳ್ಳಿ ನಾಗೇಶ್ ಅವರನ್ನು ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು
ಸಭೆಯಲ್ಲಿ ನಗರಸಭೆ ಸದಸ್ಯ ಎನ್.ಅಂಬರೀಷ್, ಮುಖಂಡರಾದ ಮಾಲೂರು ಎನ್ ವೆಂಕಟರಾಮ್ , ಕುಡುವನಹಳ್ಳಿ ಆನಂದ್, ನರೇಶ್, ನರಸಿಂಹಪ್ಪ, ಅಶ್ವಥ್, ಕೆ.ಆನಂದ್ ಕುಮಾರ್, ಕಲ್ವಮಂಜಲಿ ರವಿ, ಕಲ್ಲಂಡೂರು ನಾರಾಯಣಸ್ವಾಮಿ, ಬೆಳ್ಳೂರು ತಿರುಮಲೇಶ್, ದಿಂಬ ಚಾಮನಹಳ್ಳಿ ರಾಮಪ್ಪ, ಶಂಕರಪ್ಪ, ಮೇಡಹಾಳ ಮಂಜುನಾಥ್, ನಿವೃತ್ತಿ ಶಿಕ್ಷಕ ನರಸಿಂಹಯ್ಯ, ಐತಾರಸಹಳ್ಳಿ ಶ್ರೀನಿವಾಸ್, ಕೋಟೆ ಮಂಜುಳ ಶ್ರೀನಿವಾಸ್, ಮಧು, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…