ಕೋಲಾರ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜೇನಹಳ್ಳಿಯಲ್ಲಿ ನಡೆಯಲಿರುವ 7 ನೇ ವರ್ಷದ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಗರದ ಕೋಟೆಯ ವಾಲ್ಮೀಕಿ ಭವನದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಲಾಯಿತು.
ಮುಂದಿನ ವರ್ಷ ಫೆಬ್ರುವರಿ ತಿಂಗಳಿನ 8 ಮತ್ತು 9 ರಂದು ವಾಲ್ಮೀಕಿ ಗುರುಪೀಠದಲ್ಲಿ ಜಾತ್ರೆ ಮಹೋತ್ಸವ ನಡೆಯಲಿದ್ದು ಜಿಲ್ಲೆಯಾದ್ಯಂತ ಸಮುದಾಯದವರು ಪಕ್ಷ, ಜಾತಿ ಭೇದ ಮರೆತು ಎಲ್ಲರೂ ಭಾಗವಹಿಸಬೇಕು ಇದಕ್ಕೆ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಇದೇ ಸಂದರ್ಭದಲ್ಲಿ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಎಂ ಬಾಲಗೋವಿಂದ್, ಹಾಗೂ ಬೈರಂಡಹಳ್ಳಿ ನಾಗೇಶ್ ಅವರನ್ನು ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು
ಸಭೆಯಲ್ಲಿ ನಗರಸಭೆ ಸದಸ್ಯ ಎನ್.ಅಂಬರೀಷ್, ಮುಖಂಡರಾದ ಮಾಲೂರು ಎನ್ ವೆಂಕಟರಾಮ್ , ಕುಡುವನಹಳ್ಳಿ ಆನಂದ್, ನರೇಶ್, ನರಸಿಂಹಪ್ಪ, ಅಶ್ವಥ್, ಕೆ.ಆನಂದ್ ಕುಮಾರ್, ಕಲ್ವಮಂಜಲಿ ರವಿ, ಕಲ್ಲಂಡೂರು ನಾರಾಯಣಸ್ವಾಮಿ, ಬೆಳ್ಳೂರು ತಿರುಮಲೇಶ್, ದಿಂಬ ಚಾಮನಹಳ್ಳಿ ರಾಮಪ್ಪ, ಶಂಕರಪ್ಪ, ಮೇಡಹಾಳ ಮಂಜುನಾಥ್, ನಿವೃತ್ತಿ ಶಿಕ್ಷಕ ನರಸಿಂಹಯ್ಯ, ಐತಾರಸಹಳ್ಳಿ ಶ್ರೀನಿವಾಸ್, ಕೋಟೆ ಮಂಜುಳ ಶ್ರೀನಿವಾಸ್, ಮಧು, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…