ಕೋಲಾರ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜೇನಹಳ್ಳಿಯಲ್ಲಿ ನಡೆಯಲಿರುವ 7 ನೇ ವರ್ಷದ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಗರದ ಕೋಟೆಯ ವಾಲ್ಮೀಕಿ ಭವನದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಲಾಯಿತು.
ಮುಂದಿನ ವರ್ಷ ಫೆಬ್ರುವರಿ ತಿಂಗಳಿನ 8 ಮತ್ತು 9 ರಂದು ವಾಲ್ಮೀಕಿ ಗುರುಪೀಠದಲ್ಲಿ ಜಾತ್ರೆ ಮಹೋತ್ಸವ ನಡೆಯಲಿದ್ದು ಜಿಲ್ಲೆಯಾದ್ಯಂತ ಸಮುದಾಯದವರು ಪಕ್ಷ, ಜಾತಿ ಭೇದ ಮರೆತು ಎಲ್ಲರೂ ಭಾಗವಹಿಸಬೇಕು ಇದಕ್ಕೆ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಇದೇ ಸಂದರ್ಭದಲ್ಲಿ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಎಂ ಬಾಲಗೋವಿಂದ್, ಹಾಗೂ ಬೈರಂಡಹಳ್ಳಿ ನಾಗೇಶ್ ಅವರನ್ನು ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು
ಸಭೆಯಲ್ಲಿ ನಗರಸಭೆ ಸದಸ್ಯ ಎನ್.ಅಂಬರೀಷ್, ಮುಖಂಡರಾದ ಮಾಲೂರು ಎನ್ ವೆಂಕಟರಾಮ್ , ಕುಡುವನಹಳ್ಳಿ ಆನಂದ್, ನರೇಶ್, ನರಸಿಂಹಪ್ಪ, ಅಶ್ವಥ್, ಕೆ.ಆನಂದ್ ಕುಮಾರ್, ಕಲ್ವಮಂಜಲಿ ರವಿ, ಕಲ್ಲಂಡೂರು ನಾರಾಯಣಸ್ವಾಮಿ, ಬೆಳ್ಳೂರು ತಿರುಮಲೇಶ್, ದಿಂಬ ಚಾಮನಹಳ್ಳಿ ರಾಮಪ್ಪ, ಶಂಕರಪ್ಪ, ಮೇಡಹಾಳ ಮಂಜುನಾಥ್, ನಿವೃತ್ತಿ ಶಿಕ್ಷಕ ನರಸಿಂಹಯ್ಯ, ಐತಾರಸಹಳ್ಳಿ ಶ್ರೀನಿವಾಸ್, ಕೋಟೆ ಮಂಜುಳ ಶ್ರೀನಿವಾಸ್, ಮಧು, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…