ಅನುದಾನದ ಕೊರತೆಯಿಂದ ಸ್ಥಗಿತಗೊಂಡಿದ್ದ ವಾಲ್ಮೀಕಿ ಭವನಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆ ಅನುದಾನದಲ್ಲಿ ವಾಲ್ಮೀಕಿ ಭವನದ ಕಟ್ಟಡವನ್ನು ಸಂಪೂರ್ಣಗೊಳಿಸಲು 24 ಲಕ್ಷ ರೂ. ನೀಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ, ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಾಲ್ಮೀಕಿ ಸಂಘದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಾಲ್ಮೀಕಿ ಮಹರ್ಷಿಗಳ ಜೀವನದ ಮೌಲ್ಯಗಳೇ ಸಮಾಜಕ್ಕೆ ಮಾದರಿಯಾಗಿದೆ. ಒಬ್ಬ ಮನುಷ್ಯ ಆದರ್ಶನಾಗಿ ಜೀವನ ನಡೆಸಲು ಮಹರ್ಷಿಗಳ ಜೀವನವೇ ಒಂದು ಉದಾಹರಣೆಯಾಗಿದೆ. ಮಹರ್ಷಿ ವಾಲ್ಮೀಕಿಯು ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಎತ್ತಿ ತೋರಿಸಿದ್ದಾರೆ. ಸಚ್ಚಾರಿತ್ರ್ಯ, ಸದ್ಭಾವನಾಶೀಲ ರಾಮ, ಲಕ್ಷ್ಮಣ ಮತ್ತು ಸೀತೆಯನ್ನು ಪರಿಚಯಿಸಿದ ವಾಲ್ಮೀಕಿ ಅವರ ಜೀವನವೇ ಉನ್ನತ ಮೌಲ್ಯಗಳಿಂದ ಕೂಡಿದೆ. ವಾಲ್ಮೀಕಿ ರಾಮಾಯಣವು ಎಲ್ಲಾ ವರ್ಗಕ್ಕೂ ಆದರ್ಶವಾದ ಗ್ರಂಥ. ಪಿತೃವಾಕ್ಯಕ್ಕೆ ಬದ್ಧನಾಗಿ ರಾಮ ಜೀವನದ ಎಲ್ಲ ಮಜಲುಗಳನ್ನು ದಾಟಿ ಪುಣ್ಯ ಪುರುಷೋತ್ತಮನಾಗಿದ್ದಾನೆ. ಈ ರಾಮಾಯಣ ಕಾವ್ಯ ನಿರಂತರ ಮೌಲ್ಯಗಳನ್ನು ನೀಡುವಲ್ಲಿ ಯಶಸ್ಸು ಗಳಿಸಿದೆ. ಮನುಷ್ಯ ಮನುಷ್ಯನಾಗಿ ಬದುಕುವ ಕಲೆಯನ್ನು ನಾವೆಲ್ಲರೂ ರೂಢಿಸಿಕೊಳ್ಳಬೇಕಾಗಿದೆ ಎಂದರು.
ಈ ವೇಳೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ವಾಲ್ಮೀಕಿ ಸಮುದಾಯದ ಅಧ್ಯಕ್ಷ ಪ್ರೇಮ್ ಕುಮಾರ್. ಉಪಾಧ್ಯಕ್ಷ ಕುಮಾರ್, ಸಮುದಾಯದ ಮುಖಂಡರಾದ ಸಂಜೀವ್ ನಾಯಕ, ಲಕ್ಷ್ಮೀಪತಿ ಪಿಎಸ್ ಐ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…