ಅನುದಾನದ ಕೊರತೆಯಿಂದ ಸ್ಥಗಿತಗೊಂಡಿದ್ದ ವಾಲ್ಮೀಕಿ ಭವನಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆ ಅನುದಾನದಲ್ಲಿ ವಾಲ್ಮೀಕಿ ಭವನದ ಕಟ್ಟಡವನ್ನು ಸಂಪೂರ್ಣಗೊಳಿಸಲು 24 ಲಕ್ಷ ರೂ. ನೀಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ, ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಾಲ್ಮೀಕಿ ಸಂಘದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಾಲ್ಮೀಕಿ ಮಹರ್ಷಿಗಳ ಜೀವನದ ಮೌಲ್ಯಗಳೇ ಸಮಾಜಕ್ಕೆ ಮಾದರಿಯಾಗಿದೆ. ಒಬ್ಬ ಮನುಷ್ಯ ಆದರ್ಶನಾಗಿ ಜೀವನ ನಡೆಸಲು ಮಹರ್ಷಿಗಳ ಜೀವನವೇ ಒಂದು ಉದಾಹರಣೆಯಾಗಿದೆ. ಮಹರ್ಷಿ ವಾಲ್ಮೀಕಿಯು ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಎತ್ತಿ ತೋರಿಸಿದ್ದಾರೆ. ಸಚ್ಚಾರಿತ್ರ್ಯ, ಸದ್ಭಾವನಾಶೀಲ ರಾಮ, ಲಕ್ಷ್ಮಣ ಮತ್ತು ಸೀತೆಯನ್ನು ಪರಿಚಯಿಸಿದ ವಾಲ್ಮೀಕಿ ಅವರ ಜೀವನವೇ ಉನ್ನತ ಮೌಲ್ಯಗಳಿಂದ ಕೂಡಿದೆ. ವಾಲ್ಮೀಕಿ ರಾಮಾಯಣವು ಎಲ್ಲಾ ವರ್ಗಕ್ಕೂ ಆದರ್ಶವಾದ ಗ್ರಂಥ. ಪಿತೃವಾಕ್ಯಕ್ಕೆ ಬದ್ಧನಾಗಿ ರಾಮ ಜೀವನದ ಎಲ್ಲ ಮಜಲುಗಳನ್ನು ದಾಟಿ ಪುಣ್ಯ ಪುರುಷೋತ್ತಮನಾಗಿದ್ದಾನೆ. ಈ ರಾಮಾಯಣ ಕಾವ್ಯ ನಿರಂತರ ಮೌಲ್ಯಗಳನ್ನು ನೀಡುವಲ್ಲಿ ಯಶಸ್ಸು ಗಳಿಸಿದೆ. ಮನುಷ್ಯ ಮನುಷ್ಯನಾಗಿ ಬದುಕುವ ಕಲೆಯನ್ನು ನಾವೆಲ್ಲರೂ ರೂಢಿಸಿಕೊಳ್ಳಬೇಕಾಗಿದೆ ಎಂದರು.
ಈ ವೇಳೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ವಾಲ್ಮೀಕಿ ಸಮುದಾಯದ ಅಧ್ಯಕ್ಷ ಪ್ರೇಮ್ ಕುಮಾರ್. ಉಪಾಧ್ಯಕ್ಷ ಕುಮಾರ್, ಸಮುದಾಯದ ಮುಖಂಡರಾದ ಸಂಜೀವ್ ನಾಯಕ, ಲಕ್ಷ್ಮೀಪತಿ ಪಿಎಸ್ ಐ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…