ಅನುದಾನದ ಕೊರತೆಯಿಂದ ಸ್ಥಗಿತಗೊಂಡಿದ್ದ ವಾಲ್ಮೀಕಿ ಭವನಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆ ಅನುದಾನದಲ್ಲಿ ವಾಲ್ಮೀಕಿ ಭವನದ ಕಟ್ಟಡವನ್ನು ಸಂಪೂರ್ಣಗೊಳಿಸಲು 24 ಲಕ್ಷ ರೂ. ನೀಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ, ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಾಲ್ಮೀಕಿ ಸಂಘದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಾಲ್ಮೀಕಿ ಮಹರ್ಷಿಗಳ ಜೀವನದ ಮೌಲ್ಯಗಳೇ ಸಮಾಜಕ್ಕೆ ಮಾದರಿಯಾಗಿದೆ. ಒಬ್ಬ ಮನುಷ್ಯ ಆದರ್ಶನಾಗಿ ಜೀವನ ನಡೆಸಲು ಮಹರ್ಷಿಗಳ ಜೀವನವೇ ಒಂದು ಉದಾಹರಣೆಯಾಗಿದೆ. ಮಹರ್ಷಿ ವಾಲ್ಮೀಕಿಯು ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಎತ್ತಿ ತೋರಿಸಿದ್ದಾರೆ. ಸಚ್ಚಾರಿತ್ರ್ಯ, ಸದ್ಭಾವನಾಶೀಲ ರಾಮ, ಲಕ್ಷ್ಮಣ ಮತ್ತು ಸೀತೆಯನ್ನು ಪರಿಚಯಿಸಿದ ವಾಲ್ಮೀಕಿ ಅವರ ಜೀವನವೇ ಉನ್ನತ ಮೌಲ್ಯಗಳಿಂದ ಕೂಡಿದೆ. ವಾಲ್ಮೀಕಿ ರಾಮಾಯಣವು ಎಲ್ಲಾ ವರ್ಗಕ್ಕೂ ಆದರ್ಶವಾದ ಗ್ರಂಥ. ಪಿತೃವಾಕ್ಯಕ್ಕೆ ಬದ್ಧನಾಗಿ ರಾಮ ಜೀವನದ ಎಲ್ಲ ಮಜಲುಗಳನ್ನು ದಾಟಿ ಪುಣ್ಯ ಪುರುಷೋತ್ತಮನಾಗಿದ್ದಾನೆ. ಈ ರಾಮಾಯಣ ಕಾವ್ಯ ನಿರಂತರ ಮೌಲ್ಯಗಳನ್ನು ನೀಡುವಲ್ಲಿ ಯಶಸ್ಸು ಗಳಿಸಿದೆ. ಮನುಷ್ಯ ಮನುಷ್ಯನಾಗಿ ಬದುಕುವ ಕಲೆಯನ್ನು ನಾವೆಲ್ಲರೂ ರೂಢಿಸಿಕೊಳ್ಳಬೇಕಾಗಿದೆ ಎಂದರು.
ಈ ವೇಳೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ವಾಲ್ಮೀಕಿ ಸಮುದಾಯದ ಅಧ್ಯಕ್ಷ ಪ್ರೇಮ್ ಕುಮಾರ್. ಉಪಾಧ್ಯಕ್ಷ ಕುಮಾರ್, ಸಮುದಾಯದ ಮುಖಂಡರಾದ ಸಂಜೀವ್ ನಾಯಕ, ಲಕ್ಷ್ಮೀಪತಿ ಪಿಎಸ್ ಐ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…