ಅನುದಾನದ ಕೊರತೆಯಿಂದ ಸ್ಥಗಿತಗೊಂಡಿದ್ದ ವಾಲ್ಮೀಕಿ ಭವನಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆ ಅನುದಾನದಲ್ಲಿ ವಾಲ್ಮೀಕಿ ಭವನದ ಕಟ್ಟಡವನ್ನು ಸಂಪೂರ್ಣಗೊಳಿಸಲು 24 ಲಕ್ಷ ರೂ. ನೀಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ, ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಾಲ್ಮೀಕಿ ಸಂಘದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಾಲ್ಮೀಕಿ ಮಹರ್ಷಿಗಳ ಜೀವನದ ಮೌಲ್ಯಗಳೇ ಸಮಾಜಕ್ಕೆ ಮಾದರಿಯಾಗಿದೆ. ಒಬ್ಬ ಮನುಷ್ಯ ಆದರ್ಶನಾಗಿ ಜೀವನ ನಡೆಸಲು ಮಹರ್ಷಿಗಳ ಜೀವನವೇ ಒಂದು ಉದಾಹರಣೆಯಾಗಿದೆ. ಮಹರ್ಷಿ ವಾಲ್ಮೀಕಿಯು ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಎತ್ತಿ ತೋರಿಸಿದ್ದಾರೆ. ಸಚ್ಚಾರಿತ್ರ್ಯ, ಸದ್ಭಾವನಾಶೀಲ ರಾಮ, ಲಕ್ಷ್ಮಣ ಮತ್ತು ಸೀತೆಯನ್ನು ಪರಿಚಯಿಸಿದ ವಾಲ್ಮೀಕಿ ಅವರ ಜೀವನವೇ ಉನ್ನತ ಮೌಲ್ಯಗಳಿಂದ ಕೂಡಿದೆ. ವಾಲ್ಮೀಕಿ ರಾಮಾಯಣವು ಎಲ್ಲಾ ವರ್ಗಕ್ಕೂ ಆದರ್ಶವಾದ ಗ್ರಂಥ. ಪಿತೃವಾಕ್ಯಕ್ಕೆ ಬದ್ಧನಾಗಿ ರಾಮ ಜೀವನದ ಎಲ್ಲ ಮಜಲುಗಳನ್ನು ದಾಟಿ ಪುಣ್ಯ ಪುರುಷೋತ್ತಮನಾಗಿದ್ದಾನೆ. ಈ ರಾಮಾಯಣ ಕಾವ್ಯ ನಿರಂತರ ಮೌಲ್ಯಗಳನ್ನು ನೀಡುವಲ್ಲಿ ಯಶಸ್ಸು ಗಳಿಸಿದೆ. ಮನುಷ್ಯ ಮನುಷ್ಯನಾಗಿ ಬದುಕುವ ಕಲೆಯನ್ನು ನಾವೆಲ್ಲರೂ ರೂಢಿಸಿಕೊಳ್ಳಬೇಕಾಗಿದೆ ಎಂದರು.
ಈ ವೇಳೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ವಾಲ್ಮೀಕಿ ಸಮುದಾಯದ ಅಧ್ಯಕ್ಷ ಪ್ರೇಮ್ ಕುಮಾರ್. ಉಪಾಧ್ಯಕ್ಷ ಕುಮಾರ್, ಸಮುದಾಯದ ಮುಖಂಡರಾದ ಸಂಜೀವ್ ನಾಯಕ, ಲಕ್ಷ್ಮೀಪತಿ ಪಿಎಸ್ ಐ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…