ಅನುದಾನದ ಕೊರತೆಯಿಂದ ಸ್ಥಗಿತಗೊಂಡಿದ್ದ ವಾಲ್ಮೀಕಿ ಭವನಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆ ಅನುದಾನದಲ್ಲಿ ವಾಲ್ಮೀಕಿ ಭವನದ ಕಟ್ಟಡವನ್ನು ಸಂಪೂರ್ಣಗೊಳಿಸಲು 24 ಲಕ್ಷ ರೂ. ನೀಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ, ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಾಲ್ಮೀಕಿ ಸಂಘದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಾಲ್ಮೀಕಿ ಮಹರ್ಷಿಗಳ ಜೀವನದ ಮೌಲ್ಯಗಳೇ ಸಮಾಜಕ್ಕೆ ಮಾದರಿಯಾಗಿದೆ. ಒಬ್ಬ ಮನುಷ್ಯ ಆದರ್ಶನಾಗಿ ಜೀವನ ನಡೆಸಲು ಮಹರ್ಷಿಗಳ ಜೀವನವೇ ಒಂದು ಉದಾಹರಣೆಯಾಗಿದೆ. ಮಹರ್ಷಿ ವಾಲ್ಮೀಕಿಯು ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಎತ್ತಿ ತೋರಿಸಿದ್ದಾರೆ. ಸಚ್ಚಾರಿತ್ರ್ಯ, ಸದ್ಭಾವನಾಶೀಲ ರಾಮ, ಲಕ್ಷ್ಮಣ ಮತ್ತು ಸೀತೆಯನ್ನು ಪರಿಚಯಿಸಿದ ವಾಲ್ಮೀಕಿ ಅವರ ಜೀವನವೇ ಉನ್ನತ ಮೌಲ್ಯಗಳಿಂದ ಕೂಡಿದೆ. ವಾಲ್ಮೀಕಿ ರಾಮಾಯಣವು ಎಲ್ಲಾ ವರ್ಗಕ್ಕೂ ಆದರ್ಶವಾದ ಗ್ರಂಥ. ಪಿತೃವಾಕ್ಯಕ್ಕೆ ಬದ್ಧನಾಗಿ ರಾಮ ಜೀವನದ ಎಲ್ಲ ಮಜಲುಗಳನ್ನು ದಾಟಿ ಪುಣ್ಯ ಪುರುಷೋತ್ತಮನಾಗಿದ್ದಾನೆ. ಈ ರಾಮಾಯಣ ಕಾವ್ಯ ನಿರಂತರ ಮೌಲ್ಯಗಳನ್ನು ನೀಡುವಲ್ಲಿ ಯಶಸ್ಸು ಗಳಿಸಿದೆ. ಮನುಷ್ಯ ಮನುಷ್ಯನಾಗಿ ಬದುಕುವ ಕಲೆಯನ್ನು ನಾವೆಲ್ಲರೂ ರೂಢಿಸಿಕೊಳ್ಳಬೇಕಾಗಿದೆ ಎಂದರು.
ಈ ವೇಳೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ವಾಲ್ಮೀಕಿ ಸಮುದಾಯದ ಅಧ್ಯಕ್ಷ ಪ್ರೇಮ್ ಕುಮಾರ್. ಉಪಾಧ್ಯಕ್ಷ ಕುಮಾರ್, ಸಮುದಾಯದ ಮುಖಂಡರಾದ ಸಂಜೀವ್ ನಾಯಕ, ಲಕ್ಷ್ಮೀಪತಿ ಪಿಎಸ್ ಐ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…