Categories: ಕೋಲಾರ

ವಾಲ್ಮೀಕಿ ಭವನದ ಜಾಗ ಒತ್ತುವರಿ ತೆರವುಗೊಳಿಸದೇ ಗೋಡೆ ಕಟ್ಟಲು ಮುಂದಾದ ಪ್ರಭಾವಿಗಳು- ಆನಂದ್ ಕುಮಾರ್ ಆರೋಪ

ಕೋಲಾರ: ನಗರದಲ್ಲಿನ ವಾಲ್ಮೀಕಿ ಸಮುದಾಯ ಭವನಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಪಕ್ಕದ ಕಲ್ಯಾಣ ಮಂಟಪದ ಮಾಲೀಕನು ಒತ್ತುವರಿ ಮಾಡಿಕೊಂಡಿದ್ದು ಅದನ್ನು ತೆರವುಗೊಳಿಸಬೇಕಾದ ಜಿಲ್ಲಾಡಳಿತವು ಸಮುದಾಯದ ಕೆಲವು ಮುಖಂಡರ ಪ್ರಭಾವದಿಂದ ಕಾಂಪೌಂಡ್ ಗೋಡೆ ಕಟ್ಟಲು ಮುಂದಾಗಿದ್ದು ಕಾಮಗಾರಿ ನಿಲ್ಲಿಸದೇ ಹೋದರೆ ಮುಂದೆ ಉ್ರಗವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಅಖಿಲ ಭಾರತ ವಾಲ್ಮೀಕಿ ಮಾಹಾಸಭಾದ ತಾಲೂಕು ಅಧ್ಯಕ್ಷ ಕೆ.ಆನಂದ್ ಕುಮಾರ್ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಾಲ್ಮೀಕಿ ಸಮುದಾಯ ಭವನಕ್ಕೆ ಸುಮಾರು 31 ಗುಂಟೆ ಜಾಗವನ್ನು ನಿಗದಿಪಡಿಸಲಾಗಿದೆ ಭವನದ ಪಕ್ಕದಲ್ಲಿ ಖಾಸಗಿ ಕಲ್ಯಾಣ ಮಂಟಪದ ಮಾಲೀಕನು ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಹಿಂದೆ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಅಧಿಕಾರಿಗಳು ಸಹ ಒತ್ತುವರಿ ತೆರೆವಿಗೆ ಆದೇಶ ನೀಡಿದ್ದರೂ ಯಾವುದೇ ಕ್ರಮವಾಗಲ್ಲ ಇದಕ್ಕೆ ಸಮುದಾಯದ ಕೆಲವು ಪ್ರಭಾವಿ ವ್ಯಕ್ತಿಗಳು ನೇರವಾಗಿ ಶಾಮೀಲಾಗಿದ್ದಾರೆ ಎಂದು ದೂರಿದರು.

ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಗಳು ಪೂರ್ಣಗೊಂಡಿಲ್ಲದಿಂದ್ದರೂ ಶಾಸಕರು ಎಂಎಲ್ಸಿಗಳ ಒತ್ತಡದಿಂದ ಭವನವನ್ನು ಉದ್ವಾಟನೆ ಮಾಡಲಾಗಿದೆ ಭವನದ ಜಾಗದ ಸಮಸ್ಯೆಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ಇದ್ದರೂ ಕಾಂಪೌಂಡ್ ಗೋಡೆಯ ಕಾಮಗಾರಿ ಪ್ರಾರಂಭಿಸಿದ್ದಾರೆ ಕೂಡಲೇ ಜಾಗದ ಸಮಸ್ಯೆ ಇತ್ಯರ್ಥವಾಗುವ ತನಕ ಕಾಮಗಾರಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಮುಖಂಡ ನರಸಿಂಹಯ್ಯ ಮಾತನಾಡಿ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಅವರು ಸಹ ಒತ್ತುವರಿಗೆ ಸಂಬಂಧಿಸಿದಂತೆ ಸರ್ವೆ ಮಾಡಿ ಕಲ್ಯಾಣ ಮಂಟಪದ ಮಾಲೀಕನಿಗೆ ನೋಟೀಸ್ ನೀಡಿದ್ದರು ಸಮುದಾಯದ ಮುಖಂಡರು ಸಾಕಷ್ಟು ಬಾರಿ ಮನವಿ ನೀಡಿದ್ದರು ಯಾವುದೇ ತೆರವು ಮಾಡದೇ ಏಕಾಏಕಿ ಕಾಂಪೌಂಡ್ ಗೋಡೆ ಕಟ್ಟಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ರೋಣೂರು ಕೃಷ್ಣಪ್ಪ, ಮುನಿಯಪ್ಪ, ಶ್ಯಾಮ್ ನಾಯಕ್, ಮುನೇಯ್ಯ, ಅಶ್ವಥ್, ಗಿರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

7 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

12 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

13 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago