Categories: ಕೋಲಾರ

ವಾಲ್ಮೀಕಿ ಭವನದ ಜಾಗ ಒತ್ತುವರಿ ತೆರವುಗೊಳಿಸದೇ ಗೋಡೆ ಕಟ್ಟಲು ಮುಂದಾದ ಪ್ರಭಾವಿಗಳು- ಆನಂದ್ ಕುಮಾರ್ ಆರೋಪ

ಕೋಲಾರ: ನಗರದಲ್ಲಿನ ವಾಲ್ಮೀಕಿ ಸಮುದಾಯ ಭವನಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಪಕ್ಕದ ಕಲ್ಯಾಣ ಮಂಟಪದ ಮಾಲೀಕನು ಒತ್ತುವರಿ ಮಾಡಿಕೊಂಡಿದ್ದು ಅದನ್ನು ತೆರವುಗೊಳಿಸಬೇಕಾದ ಜಿಲ್ಲಾಡಳಿತವು ಸಮುದಾಯದ ಕೆಲವು ಮುಖಂಡರ ಪ್ರಭಾವದಿಂದ ಕಾಂಪೌಂಡ್ ಗೋಡೆ ಕಟ್ಟಲು ಮುಂದಾಗಿದ್ದು ಕಾಮಗಾರಿ ನಿಲ್ಲಿಸದೇ ಹೋದರೆ ಮುಂದೆ ಉ್ರಗವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಅಖಿಲ ಭಾರತ ವಾಲ್ಮೀಕಿ ಮಾಹಾಸಭಾದ ತಾಲೂಕು ಅಧ್ಯಕ್ಷ ಕೆ.ಆನಂದ್ ಕುಮಾರ್ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಾಲ್ಮೀಕಿ ಸಮುದಾಯ ಭವನಕ್ಕೆ ಸುಮಾರು 31 ಗುಂಟೆ ಜಾಗವನ್ನು ನಿಗದಿಪಡಿಸಲಾಗಿದೆ ಭವನದ ಪಕ್ಕದಲ್ಲಿ ಖಾಸಗಿ ಕಲ್ಯಾಣ ಮಂಟಪದ ಮಾಲೀಕನು ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಹಿಂದೆ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಅಧಿಕಾರಿಗಳು ಸಹ ಒತ್ತುವರಿ ತೆರೆವಿಗೆ ಆದೇಶ ನೀಡಿದ್ದರೂ ಯಾವುದೇ ಕ್ರಮವಾಗಲ್ಲ ಇದಕ್ಕೆ ಸಮುದಾಯದ ಕೆಲವು ಪ್ರಭಾವಿ ವ್ಯಕ್ತಿಗಳು ನೇರವಾಗಿ ಶಾಮೀಲಾಗಿದ್ದಾರೆ ಎಂದು ದೂರಿದರು.

ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಗಳು ಪೂರ್ಣಗೊಂಡಿಲ್ಲದಿಂದ್ದರೂ ಶಾಸಕರು ಎಂಎಲ್ಸಿಗಳ ಒತ್ತಡದಿಂದ ಭವನವನ್ನು ಉದ್ವಾಟನೆ ಮಾಡಲಾಗಿದೆ ಭವನದ ಜಾಗದ ಸಮಸ್ಯೆಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ಇದ್ದರೂ ಕಾಂಪೌಂಡ್ ಗೋಡೆಯ ಕಾಮಗಾರಿ ಪ್ರಾರಂಭಿಸಿದ್ದಾರೆ ಕೂಡಲೇ ಜಾಗದ ಸಮಸ್ಯೆ ಇತ್ಯರ್ಥವಾಗುವ ತನಕ ಕಾಮಗಾರಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಮುಖಂಡ ನರಸಿಂಹಯ್ಯ ಮಾತನಾಡಿ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಅವರು ಸಹ ಒತ್ತುವರಿಗೆ ಸಂಬಂಧಿಸಿದಂತೆ ಸರ್ವೆ ಮಾಡಿ ಕಲ್ಯಾಣ ಮಂಟಪದ ಮಾಲೀಕನಿಗೆ ನೋಟೀಸ್ ನೀಡಿದ್ದರು ಸಮುದಾಯದ ಮುಖಂಡರು ಸಾಕಷ್ಟು ಬಾರಿ ಮನವಿ ನೀಡಿದ್ದರು ಯಾವುದೇ ತೆರವು ಮಾಡದೇ ಏಕಾಏಕಿ ಕಾಂಪೌಂಡ್ ಗೋಡೆ ಕಟ್ಟಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ರೋಣೂರು ಕೃಷ್ಣಪ್ಪ, ಮುನಿಯಪ್ಪ, ಶ್ಯಾಮ್ ನಾಯಕ್, ಮುನೇಯ್ಯ, ಅಶ್ವಥ್, ಗಿರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

4 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago