ಕೋಲಾರ: ನಗರದಲ್ಲಿನ ವಾಲ್ಮೀಕಿ ಸಮುದಾಯ ಭವನಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಪಕ್ಕದ ಕಲ್ಯಾಣ ಮಂಟಪದ ಮಾಲೀಕನು ಒತ್ತುವರಿ ಮಾಡಿಕೊಂಡಿದ್ದು ಅದನ್ನು ತೆರವುಗೊಳಿಸಬೇಕಾದ ಜಿಲ್ಲಾಡಳಿತವು ಸಮುದಾಯದ ಕೆಲವು ಮುಖಂಡರ ಪ್ರಭಾವದಿಂದ ಕಾಂಪೌಂಡ್ ಗೋಡೆ ಕಟ್ಟಲು ಮುಂದಾಗಿದ್ದು ಕಾಮಗಾರಿ ನಿಲ್ಲಿಸದೇ ಹೋದರೆ ಮುಂದೆ ಉ್ರಗವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಅಖಿಲ ಭಾರತ ವಾಲ್ಮೀಕಿ ಮಾಹಾಸಭಾದ ತಾಲೂಕು ಅಧ್ಯಕ್ಷ ಕೆ.ಆನಂದ್ ಕುಮಾರ್ ಒತ್ತಾಯಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಾಲ್ಮೀಕಿ ಸಮುದಾಯ ಭವನಕ್ಕೆ ಸುಮಾರು 31 ಗುಂಟೆ ಜಾಗವನ್ನು ನಿಗದಿಪಡಿಸಲಾಗಿದೆ ಭವನದ ಪಕ್ಕದಲ್ಲಿ ಖಾಸಗಿ ಕಲ್ಯಾಣ ಮಂಟಪದ ಮಾಲೀಕನು ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಹಿಂದೆ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಅಧಿಕಾರಿಗಳು ಸಹ ಒತ್ತುವರಿ ತೆರೆವಿಗೆ ಆದೇಶ ನೀಡಿದ್ದರೂ ಯಾವುದೇ ಕ್ರಮವಾಗಲ್ಲ ಇದಕ್ಕೆ ಸಮುದಾಯದ ಕೆಲವು ಪ್ರಭಾವಿ ವ್ಯಕ್ತಿಗಳು ನೇರವಾಗಿ ಶಾಮೀಲಾಗಿದ್ದಾರೆ ಎಂದು ದೂರಿದರು.
ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಗಳು ಪೂರ್ಣಗೊಂಡಿಲ್ಲದಿಂದ್ದರೂ ಶಾಸಕರು ಎಂಎಲ್ಸಿಗಳ ಒತ್ತಡದಿಂದ ಭವನವನ್ನು ಉದ್ವಾಟನೆ ಮಾಡಲಾಗಿದೆ ಭವನದ ಜಾಗದ ಸಮಸ್ಯೆಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ಇದ್ದರೂ ಕಾಂಪೌಂಡ್ ಗೋಡೆಯ ಕಾಮಗಾರಿ ಪ್ರಾರಂಭಿಸಿದ್ದಾರೆ ಕೂಡಲೇ ಜಾಗದ ಸಮಸ್ಯೆ ಇತ್ಯರ್ಥವಾಗುವ ತನಕ ಕಾಮಗಾರಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಮುಖಂಡ ನರಸಿಂಹಯ್ಯ ಮಾತನಾಡಿ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಅವರು ಸಹ ಒತ್ತುವರಿಗೆ ಸಂಬಂಧಿಸಿದಂತೆ ಸರ್ವೆ ಮಾಡಿ ಕಲ್ಯಾಣ ಮಂಟಪದ ಮಾಲೀಕನಿಗೆ ನೋಟೀಸ್ ನೀಡಿದ್ದರು ಸಮುದಾಯದ ಮುಖಂಡರು ಸಾಕಷ್ಟು ಬಾರಿ ಮನವಿ ನೀಡಿದ್ದರು ಯಾವುದೇ ತೆರವು ಮಾಡದೇ ಏಕಾಏಕಿ ಕಾಂಪೌಂಡ್ ಗೋಡೆ ಕಟ್ಟಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ರೋಣೂರು ಕೃಷ್ಣಪ್ಪ, ಮುನಿಯಪ್ಪ, ಶ್ಯಾಮ್ ನಾಯಕ್, ಮುನೇಯ್ಯ, ಅಶ್ವಥ್, ಗಿರೀಶ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…