Categories: ಕೋಲಾರ

ವಾಲ್ಮೀಕಿ ಭವನದ ಜಾಗ ಒತ್ತುವರಿ ತೆರವುಗೊಳಿಸದೇ ಗೋಡೆ ಕಟ್ಟಲು ಮುಂದಾದ ಪ್ರಭಾವಿಗಳು- ಆನಂದ್ ಕುಮಾರ್ ಆರೋಪ

ಕೋಲಾರ: ನಗರದಲ್ಲಿನ ವಾಲ್ಮೀಕಿ ಸಮುದಾಯ ಭವನಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಪಕ್ಕದ ಕಲ್ಯಾಣ ಮಂಟಪದ ಮಾಲೀಕನು ಒತ್ತುವರಿ ಮಾಡಿಕೊಂಡಿದ್ದು ಅದನ್ನು ತೆರವುಗೊಳಿಸಬೇಕಾದ ಜಿಲ್ಲಾಡಳಿತವು ಸಮುದಾಯದ ಕೆಲವು ಮುಖಂಡರ ಪ್ರಭಾವದಿಂದ ಕಾಂಪೌಂಡ್ ಗೋಡೆ ಕಟ್ಟಲು ಮುಂದಾಗಿದ್ದು ಕಾಮಗಾರಿ ನಿಲ್ಲಿಸದೇ ಹೋದರೆ ಮುಂದೆ ಉ್ರಗವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಅಖಿಲ ಭಾರತ ವಾಲ್ಮೀಕಿ ಮಾಹಾಸಭಾದ ತಾಲೂಕು ಅಧ್ಯಕ್ಷ ಕೆ.ಆನಂದ್ ಕುಮಾರ್ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಾಲ್ಮೀಕಿ ಸಮುದಾಯ ಭವನಕ್ಕೆ ಸುಮಾರು 31 ಗುಂಟೆ ಜಾಗವನ್ನು ನಿಗದಿಪಡಿಸಲಾಗಿದೆ ಭವನದ ಪಕ್ಕದಲ್ಲಿ ಖಾಸಗಿ ಕಲ್ಯಾಣ ಮಂಟಪದ ಮಾಲೀಕನು ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಹಿಂದೆ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಅಧಿಕಾರಿಗಳು ಸಹ ಒತ್ತುವರಿ ತೆರೆವಿಗೆ ಆದೇಶ ನೀಡಿದ್ದರೂ ಯಾವುದೇ ಕ್ರಮವಾಗಲ್ಲ ಇದಕ್ಕೆ ಸಮುದಾಯದ ಕೆಲವು ಪ್ರಭಾವಿ ವ್ಯಕ್ತಿಗಳು ನೇರವಾಗಿ ಶಾಮೀಲಾಗಿದ್ದಾರೆ ಎಂದು ದೂರಿದರು.

ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಗಳು ಪೂರ್ಣಗೊಂಡಿಲ್ಲದಿಂದ್ದರೂ ಶಾಸಕರು ಎಂಎಲ್ಸಿಗಳ ಒತ್ತಡದಿಂದ ಭವನವನ್ನು ಉದ್ವಾಟನೆ ಮಾಡಲಾಗಿದೆ ಭವನದ ಜಾಗದ ಸಮಸ್ಯೆಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ಇದ್ದರೂ ಕಾಂಪೌಂಡ್ ಗೋಡೆಯ ಕಾಮಗಾರಿ ಪ್ರಾರಂಭಿಸಿದ್ದಾರೆ ಕೂಡಲೇ ಜಾಗದ ಸಮಸ್ಯೆ ಇತ್ಯರ್ಥವಾಗುವ ತನಕ ಕಾಮಗಾರಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಮುಖಂಡ ನರಸಿಂಹಯ್ಯ ಮಾತನಾಡಿ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಅವರು ಸಹ ಒತ್ತುವರಿಗೆ ಸಂಬಂಧಿಸಿದಂತೆ ಸರ್ವೆ ಮಾಡಿ ಕಲ್ಯಾಣ ಮಂಟಪದ ಮಾಲೀಕನಿಗೆ ನೋಟೀಸ್ ನೀಡಿದ್ದರು ಸಮುದಾಯದ ಮುಖಂಡರು ಸಾಕಷ್ಟು ಬಾರಿ ಮನವಿ ನೀಡಿದ್ದರು ಯಾವುದೇ ತೆರವು ಮಾಡದೇ ಏಕಾಏಕಿ ಕಾಂಪೌಂಡ್ ಗೋಡೆ ಕಟ್ಟಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ರೋಣೂರು ಕೃಷ್ಣಪ್ಪ, ಮುನಿಯಪ್ಪ, ಶ್ಯಾಮ್ ನಾಯಕ್, ಮುನೇಯ್ಯ, ಅಶ್ವಥ್, ಗಿರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

13 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

13 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 day ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 days ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 days ago