Categories: ಕೋಲಾರ

ವಾಲ್ಮೀಕಿ ಭವನದ ಜಾಗ ಒತ್ತುವರಿ ತೆರವುಗೊಳಿಸದೇ ಗೋಡೆ ಕಟ್ಟಲು ಮುಂದಾದ ಪ್ರಭಾವಿಗಳು- ಆನಂದ್ ಕುಮಾರ್ ಆರೋಪ

ಕೋಲಾರ: ನಗರದಲ್ಲಿನ ವಾಲ್ಮೀಕಿ ಸಮುದಾಯ ಭವನಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಪಕ್ಕದ ಕಲ್ಯಾಣ ಮಂಟಪದ ಮಾಲೀಕನು ಒತ್ತುವರಿ ಮಾಡಿಕೊಂಡಿದ್ದು ಅದನ್ನು ತೆರವುಗೊಳಿಸಬೇಕಾದ ಜಿಲ್ಲಾಡಳಿತವು ಸಮುದಾಯದ ಕೆಲವು ಮುಖಂಡರ ಪ್ರಭಾವದಿಂದ ಕಾಂಪೌಂಡ್ ಗೋಡೆ ಕಟ್ಟಲು ಮುಂದಾಗಿದ್ದು ಕಾಮಗಾರಿ ನಿಲ್ಲಿಸದೇ ಹೋದರೆ ಮುಂದೆ ಉ್ರಗವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಅಖಿಲ ಭಾರತ ವಾಲ್ಮೀಕಿ ಮಾಹಾಸಭಾದ ತಾಲೂಕು ಅಧ್ಯಕ್ಷ ಕೆ.ಆನಂದ್ ಕುಮಾರ್ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಾಲ್ಮೀಕಿ ಸಮುದಾಯ ಭವನಕ್ಕೆ ಸುಮಾರು 31 ಗುಂಟೆ ಜಾಗವನ್ನು ನಿಗದಿಪಡಿಸಲಾಗಿದೆ ಭವನದ ಪಕ್ಕದಲ್ಲಿ ಖಾಸಗಿ ಕಲ್ಯಾಣ ಮಂಟಪದ ಮಾಲೀಕನು ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಹಿಂದೆ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಅಧಿಕಾರಿಗಳು ಸಹ ಒತ್ತುವರಿ ತೆರೆವಿಗೆ ಆದೇಶ ನೀಡಿದ್ದರೂ ಯಾವುದೇ ಕ್ರಮವಾಗಲ್ಲ ಇದಕ್ಕೆ ಸಮುದಾಯದ ಕೆಲವು ಪ್ರಭಾವಿ ವ್ಯಕ್ತಿಗಳು ನೇರವಾಗಿ ಶಾಮೀಲಾಗಿದ್ದಾರೆ ಎಂದು ದೂರಿದರು.

ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಗಳು ಪೂರ್ಣಗೊಂಡಿಲ್ಲದಿಂದ್ದರೂ ಶಾಸಕರು ಎಂಎಲ್ಸಿಗಳ ಒತ್ತಡದಿಂದ ಭವನವನ್ನು ಉದ್ವಾಟನೆ ಮಾಡಲಾಗಿದೆ ಭವನದ ಜಾಗದ ಸಮಸ್ಯೆಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ಇದ್ದರೂ ಕಾಂಪೌಂಡ್ ಗೋಡೆಯ ಕಾಮಗಾರಿ ಪ್ರಾರಂಭಿಸಿದ್ದಾರೆ ಕೂಡಲೇ ಜಾಗದ ಸಮಸ್ಯೆ ಇತ್ಯರ್ಥವಾಗುವ ತನಕ ಕಾಮಗಾರಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಮುಖಂಡ ನರಸಿಂಹಯ್ಯ ಮಾತನಾಡಿ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಅವರು ಸಹ ಒತ್ತುವರಿಗೆ ಸಂಬಂಧಿಸಿದಂತೆ ಸರ್ವೆ ಮಾಡಿ ಕಲ್ಯಾಣ ಮಂಟಪದ ಮಾಲೀಕನಿಗೆ ನೋಟೀಸ್ ನೀಡಿದ್ದರು ಸಮುದಾಯದ ಮುಖಂಡರು ಸಾಕಷ್ಟು ಬಾರಿ ಮನವಿ ನೀಡಿದ್ದರು ಯಾವುದೇ ತೆರವು ಮಾಡದೇ ಏಕಾಏಕಿ ಕಾಂಪೌಂಡ್ ಗೋಡೆ ಕಟ್ಟಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ರೋಣೂರು ಕೃಷ್ಣಪ್ಪ, ಮುನಿಯಪ್ಪ, ಶ್ಯಾಮ್ ನಾಯಕ್, ಮುನೇಯ್ಯ, ಅಶ್ವಥ್, ಗಿರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

10 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

12 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

12 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

21 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

1 day ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

1 day ago