ಕೋಲಾರ: ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತಂತೆ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸುವಂತೆ ಜೆಡಿಯು ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ ಕೆ.ನಾಗರಾಜ್ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಈಗಾಗಲೇ ತನಿಖೆ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಗಮನಕ್ಕೆ ಬಾರದೆ ಹಗರಣ ನಡೆದಿರುವುದಿಲ್ಲ. ಪ್ರಕರಣದ ಸತ್ಯ ಸತ್ಯತೆ ಹೊರಬರಬೇಕಾದರೆ ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಭ್ರಷ್ಟಾಚಾರವು ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಹಾಗೂ ಹೊರ ರಾಜ್ಯಗಳ ಚುನಾವಣೆಗಳಲ್ಲಿ ಹಣ ಖರ್ಚು ಮಾಡುವ ಉದ್ದೇಶದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಡವರ ದಲಿತರ ಅಭಿವೃದ್ಧಿಗಾಗಿ ಇದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಮತ್ತು ಮೈಸೂರಿನ ಮುಡಾ ಹಗರಣದಲ್ಲಿ ತಪ್ಪು ನಡೆದಿಲ್ಲದೇ ಹೋದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಆರೋಪ ಎದುರಿಸುತ್ತಿರುವವರು ಆರೋಪದಿಂದ ಮುಕ್ತರಾಗಿ ಬರಲಿ ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ವಿರೋಧ ಪಕ್ಷಗಳು ಕೂಡ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ರಾಜ್ಯದ ದೊಡ್ಡ ಹಗರಣವಾಗಿರುವುದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೋಚಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಾಗಿದೆ ಎಂದು ಆರೋಪಿಸಿದರು.
ಇನ್ನೂ ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ಹಗರಣದಿಂದ ಬಡವರಿಗೆ ದಲಿತರಿಗೆ ದೊರೆಯುವ ಸೌಲಭ್ಯದ ಹಣ ದುರ್ಬಳಕೆ ಮಾಡಿಕೊಂಡಿದ್ದರಿಂದ ಸರಕಾರ ಕೂಡಲೇ ನಿಗಮಕ್ಕೆ ಸಿಗಬೇಕಾದ ಹಣವನ್ನು ಕೂಡಲೇ ನೀಡಬೇಕು. ಜೊತೆಗೆ ಪ್ರಕರಣದಲ್ಲಿ ಭಾಗಿಯಾಗಿರುವ ಮಾಜಿ ಸಚಿವ ನಾಗೇಂದ್ರ ಸೇರಿದಂತೆ ಯಾರೆಲ್ಲ ಈ ಪ್ರಕರಣದಲ್ಲಿ ಇದ್ದಾರೆ ಅವರೆಲ್ಲರಿಗೂ ಶಿಕ್ಷೆ ಆಗಬೇಕು ಎಂದು ಕಲ್ಲಂಡೂರು ಡಾ.ಕೆ ನಾಗರಾಜ್ ಆಗ್ರಹಿಸಿದರು.
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…