ಕೋಲಾರ: ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತಂತೆ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸುವಂತೆ ಜೆಡಿಯು ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ ಕೆ.ನಾಗರಾಜ್ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಈಗಾಗಲೇ ತನಿಖೆ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಗಮನಕ್ಕೆ ಬಾರದೆ ಹಗರಣ ನಡೆದಿರುವುದಿಲ್ಲ. ಪ್ರಕರಣದ ಸತ್ಯ ಸತ್ಯತೆ ಹೊರಬರಬೇಕಾದರೆ ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಭ್ರಷ್ಟಾಚಾರವು ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಹಾಗೂ ಹೊರ ರಾಜ್ಯಗಳ ಚುನಾವಣೆಗಳಲ್ಲಿ ಹಣ ಖರ್ಚು ಮಾಡುವ ಉದ್ದೇಶದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಡವರ ದಲಿತರ ಅಭಿವೃದ್ಧಿಗಾಗಿ ಇದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಮತ್ತು ಮೈಸೂರಿನ ಮುಡಾ ಹಗರಣದಲ್ಲಿ ತಪ್ಪು ನಡೆದಿಲ್ಲದೇ ಹೋದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಆರೋಪ ಎದುರಿಸುತ್ತಿರುವವರು ಆರೋಪದಿಂದ ಮುಕ್ತರಾಗಿ ಬರಲಿ ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ವಿರೋಧ ಪಕ್ಷಗಳು ಕೂಡ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ರಾಜ್ಯದ ದೊಡ್ಡ ಹಗರಣವಾಗಿರುವುದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೋಚಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಾಗಿದೆ ಎಂದು ಆರೋಪಿಸಿದರು.
ಇನ್ನೂ ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ಹಗರಣದಿಂದ ಬಡವರಿಗೆ ದಲಿತರಿಗೆ ದೊರೆಯುವ ಸೌಲಭ್ಯದ ಹಣ ದುರ್ಬಳಕೆ ಮಾಡಿಕೊಂಡಿದ್ದರಿಂದ ಸರಕಾರ ಕೂಡಲೇ ನಿಗಮಕ್ಕೆ ಸಿಗಬೇಕಾದ ಹಣವನ್ನು ಕೂಡಲೇ ನೀಡಬೇಕು. ಜೊತೆಗೆ ಪ್ರಕರಣದಲ್ಲಿ ಭಾಗಿಯಾಗಿರುವ ಮಾಜಿ ಸಚಿವ ನಾಗೇಂದ್ರ ಸೇರಿದಂತೆ ಯಾರೆಲ್ಲ ಈ ಪ್ರಕರಣದಲ್ಲಿ ಇದ್ದಾರೆ ಅವರೆಲ್ಲರಿಗೂ ಶಿಕ್ಷೆ ಆಗಬೇಕು ಎಂದು ಕಲ್ಲಂಡೂರು ಡಾ.ಕೆ ನಾಗರಾಜ್ ಆಗ್ರಹಿಸಿದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…