ವಾಲ್ಮೀಕಿ ರಾಮಾಯಣದ ಮೇಲೆ ಹಲವಾರು ಕಾವ್ಯ, ಕಾದಂಬರಿಗಳು ರಚನೆ- ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್

ವಾಲ್ಮೀಕಿ ರಾಮಾಯಣದ ಮೇಲೆ ಹಲವಾರು ಕಾವ್ಯಗಳು ಕಾದಂಬರಿಗಳು ರಚನೆಯಾಗಿವೆ. ರಾಷ್ಟ್ರಕವಿ ಕುವೆಂಪು ಅವರು ಬರೆದ ರಾಮಾಯಣ ದರ್ಶನಂ ನಲ್ಲಿ ರಾಮಾಯಣವನ್ನು ಪ್ರಸ್ತುತ ಕಾಲಘಟ್ಟಕ್ಕೆ ಹೊಂದಿಕೆಯಾಗುವಂತೆ ಬರೆದಿದ್ದಾರೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಹೇಳಿದರು.

ನಗರದ ಡಾ.ರಾಜ್‌ಕುಮಾರ್ ಕಲಾ ಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಮಾಯಣ ಮಹಾಕಾವ್ಯ ಬರೆದ ಆದಿ ಕವಿ ವಾಲ್ಮೀಕಿ ಅವರು ತಮ್ಮ ಕಾವ್ಯದಲ್ಲಿ ಕೌಟುಂಬಿಕ, ಸಾಮಾಜಿಕ ಮೌಲ್ಯಗಳನ್ನು 24 ಸಾವಿರ ಶ್ಲೋಕಗಳ ಮೂಲಕ ಕಟ್ಟಿಕೊಟ್ಟಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಪ್ರಾಧ್ಯಾಪಕ ಚಿಕ್ಕಣ್ಣ ಅವರು, ವಾಲ್ಮೀಕಿ ಜಯಂತಿಯನ್ನು 2004-05 ರಿಂದ ಆಚರಣೆ ಮಾಡುತ್ತಿದ್ದೇವೆ. ವಾಲ್ಮೀಕಿಯ ಮೂಲ ಹೆಸರು ರತ್ನಾಕರ ಎಂಬುದು, ಬೇಡ ಜನಾಂಗದಲ್ಲಿ ಹುಟ್ಟಿದ್ದ ರತ್ನಾಕರ ಅನ್ಯ ಮಾರ್ಗದ ಮೂಲಕ ಬದುಕು ಕಟ್ಟಿಕೊಳ್ಳುತ್ತಾನೆ, ಈ ಮಧ್ಯೆ ನಾರದ ಮುನಿಗಳ ಭೇಟಿಯಾಗುತ್ತದೆ ಅವರಿಬ್ಬರ ನಡುವೆ ಚರ್ಚೆಗಳು ನಡೆದು ನಾರದ ಮುನಿಗಳ ಮಾರ್ಗದರ್ಶನದಂತೆ ಬದುಕು ಬದಲಿಸಿಕೊಳ್ಳಲು ತಪಸ್ಸು ಮಾಡುತ್ತಾನೆ ಎಂದು ತಿಳಿಸಿದರು.

ಆರಂಭದಲ್ಲಿ ಮುರ ಎಂದು ಉಚ್ಛರಣೆ ಮಾಡುತ್ತಾನೆ ಅದು ರಾಮ ರಾಮ ಎದ ಬದಲಾಗುತ್ತಾ ಹೋಗುತ್ತದೆ. ರಾಮ ಎಂಬುದು ವಿಷ್ಣುವಿನ ಹೆಸರು ಎಂಬುದು ಅರಿವಿಗೆ ಬರುತ್ತದೆ. ವಾಲ್ಮೀಕಿ ತಪಸ್ಸು ಮಾಡುವಾಗ ಆತನ ಸುತ್ತ ಹುತ್ತ ಬೆಳೆಯುತ್ತಾ ರತ್ನಾಕರನನ್ನು ಆವರಿಸಿಕೊಳ್ಳುತ್ತದೆ ಆ ಹುತ್ತವನ್ನು ಬೇಧಿಸಿ ಹೊರಗೆ ಬಂದ ನಂತರ ವಾಲ್ಮೀಕಿಯಾಗುತ್ತಾರೆ ಎಂದು ಹೇಳಿದರು.

ಆದಿ ಕವಿ ವಾಲ್ಮೀಕಿ ಅವರು 24000 ಶ್ಲೋಕಗಳನ್ನು ರಚನೆ ಮಾಡಿದರು, ಜಗತ್ತಿನ ಶ್ರೇಷ್ಠ ಕವಿಗಳಲ್ಲಿ ಒಬ್ಬರು, ವಾಲ್ಮೀಕಿ ಅವರು ಒಂದು ಜನಾಂಗಕ್ಕೆ ಸೀಮಿತರಾದವರಲ್ಲ, ಅವರು ಸರ್ವ ಜನಾಂಗದ ಕಣ್ಮಣಿ, ಮಾನವೀಯ ಮೌಲ್ಯಗಳು, ದೇಶಪ್ರೇಮ, ಪಿತೃವಾಕ್ಯ ಪರಿಪಾಲನೆ, ಸಹೋದರರ ಅನುಬಂಧದ ಹೇಗಿರಬೇಕು ಎಂಬುದರ ಬಗ್ಗೆ ತನ್ನ ಮಹಾಕಾವ್ಯದಲ್ಲಿ ಎಳೆ ಎಳೆಯಾಗಿ ಬಿಸಿಟ್ಟಿದ್ದಾರೆ ಎಂದರು.

ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡುವುದು ಜನಸಾಮಾನ್ಯರು ಅವರ ತತ್ವ ಆದರ್ಶಗಳನ್ನ ರೂಡಿಸಿಕೊಳ್ಳಲಿ ಎಂಬ ಕಾರಣಕ್ಕೆ, ಹಾಗಾಗಿ ವಾಲ್ಮೀಕಿಯ ತತ್ವಾದರ್ಶಗಳು ಮನೆಮನೆಗೆ ತಲುಪಿಸಲು ಒಂದು ತಿಂಗಳ ಕಾಲ ತಾಲ್ಲೂಕಿನಾದ್ಯಂತ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಬಗ್ಗೆ ಅಸಮಾಧಾನ:

ಕಾರ್ಯಕ್ರಮ ಆರಂಭಕ್ಕೂ ಮುನ್ನ ಎಲ್ಲವೂ ಗೊಂದಲಕಾರಿಯಾಗಿದ್ದ ಕಾರಣಕ್ಕೆ ಪ್ರಾಧ್ಯಾಪಕ ಚಿಕ್ಕಣ್ಣ ತೀವ್ರ ಅಸಮಾಧಾನ ಹೊರಹಾಕಿದರು. ಇದು ಸರ್ಕಾರಿ ಕಾರ್ಯಕ್ರಮ ಆದರೂ ಕಾರ್ಯಕ್ರಮ ಆರಂಭಕ್ಕೂ ಮುನ್ನ ನಾಡಗೀತೆ ಹಾಡಲಿಲ್ಲ, ಆಹ್ವಾನಪತ್ರಿಕೆ ಇಲ್ಲ ಕಾರ್ಯಕ್ರಮ ಅಸ್ತವ್ಯಸ್ತದಿಂದ ಕೂಡಿದೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರು ಯಾರು? ಇಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಯಾರಿದ್ದಾರೆ ಗೊತ್ತಿಲ್ಲ, ಯಾಕಾಗಿ ಇಂಮತಹ ಬೇಜವಾಬ್ದಾರಿ ಕೆಲಸಗಳನ್ನು ಮಾಡಬೇಕು ಎಂದು ತೀವ್ರ ಅಸಮಾಧಾನ ಹೊರಹಾಕಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ ಸಮಾಜ ಒಗ್ಗಟ್ಟಿನಿಂದ ಇದ್ದರೆ ಸರ್ಕಾರದಿಂದ ಆಗಬೇಕಾದ ಸಮುದಾಯದ ಕೆಲಸಗಳು ಸುಲಭವಾಗಿ ನಡೆಯುತ್ತವೆ. ವಾಲ್ಮೀಕಿ ಭವನಕ್ಕೆ ಸರ್ಕಾರ ಒಂದೂವರೆ ಕೋಟಿ ಬಿಡುಗಡೆ ಮಾಡಿತ್ತು, ಅನುಧಾನ ಸಾಕಾಗದೆ ಕಾಮಗಾರಿ ಕುಂಟಿತಗೊಂಡಿದೆ, ಮತ್ತೆ 50 ಲಕ್ಷ ರೂಗಳನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಆದಷ್ಟೂ ಬೇಗ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇದ್ದು ಆದಷ್ಟೂ ಬೇಗ ವಾಲ್ಮೀಕಿ ಭವನದ ಕಟ್ಟಡ ಪೂರ್ಣಗೊಳ್ಳಲಿದೆ ಎಂದರು.

ವಾಲ್ಮೀಕಿ ಗುರು ಪೀಠದ ಸ್ವಾಮೀಜಿಗಳಾದ ಕುಮಾರಸ್ವಾಮಿಗಳು ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ವಿಭಾಗಗಳಲ್ಲಿ ಸಾಧನೆಗೈದ ಸಮುದಾಯದ ಮಂಜುಳ, ಮುನೇಗೌಡ, ಪುಟ್ಟಣ್ಣ, ರಂಗಸ್ವಾಮಿ ಶಿವಶಂಕರ್, ಚಿಕ್ಕಚನ್ನಪ್ಪ, ಆಂಜಿನಪ್ಪ, ಶಿವಾನಂದ, ಗೋವಿಂದಪ್ಪ, ಸಂದೀಪ್ ಪಿ.ಹೆಚ್, ಘಾಟಿ ದೇವಸ್ಥಾನದ ಇಒ ಕೃಷ್ಣಪ್ಪ, ನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ತಾಲ್ಲೂಕು ಕಚೇರಿಯಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ‌ಸಲ್ಲಿಸಲಾಯಿತು, ಕಲಾತಂಡದ ಮೆರವಣಿಗೆಗೆ ಶಾಸಕ ಧೀರಜ್ ಮುನಿರಾಜು ಅವರು ಚಾಲನೆ ನೀಡಿದರು, ಸಾಂಸ್ಕೃತಿಕ ಕಲಾತಂಡಗಳು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿಟ್ಟು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ಡಾ.ರಾಜ್‌ಕುಮಾರ್ ಕಲಾಭವನಕ್ಕೆ ತೆರಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ವಾಲ್ಮೀಕಿ ಸಂಘದ ಅಧ್ಯಕ್ಚ ಪ್ರೇಮಕುಮಾರ್, ಕನ್ನಡಪರ ಹೋರಾಟಗಾರ ಸಂಜೀವನಾಯಕ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

13 minutes ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

6 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

7 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

10 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

13 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

1 day ago