ವಾಲ್ಮೀಕಿ ಸಮಾಜದ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳದ ಆರೋಪ

ಆಕೆ ಪೋಷಕರ ವಿರೋಧದ ನಡುವೆ ಪ್ರೀತಿಸಿ ಮದುವೆ ಆಗಿದ್ದಳು. ಗಂಡನ ಜೊತೆಗೆ ನೆಮ್ಮದಿಯಾಗಿ ಇರಬೇಕು ಎಂದು ಒಂದು ಸೈಟ್ ಕೊಂಡುಕೊಳ್ಳಲು‌ ಮುಂದಾಗಿದ್ದಾಳೆ. ಈ ವೇಳೆ ಸೈಟ್ ಕೊಳ್ಳಲು ಓರ್ವ ಸ್ವಾಮೀಜಿಯನ್ನ ಮಧ್ಯಸ್ಥಿಕೆಗೆ ಕರೆದಿದ್ದಾಳೆ. ಇವರಿಬ್ಬರ ಮಧ್ಯೆ ಹಣದ ವಿಚಾರಕ್ಕೆ ಮನಃಸ್ತಾಪ ಉಂಟಾಗಿ ಈಗ ಸ್ವಾಮೀಜಿ ನನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪ ಮಾಡಿದ್ದಾಳೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ಓದಿ……………

ಹೌದು ಹೀಗೆ ದಾಖಲೆಗಳನ್ನ ತೋರಿಸುತ್ತಿರುವ ಸ್ವಾಮೀಜಿ, ನಮ್ಮ ಸ್ವಾಮೀಜಿ ಅಂಥವರಲ್ಲ ಎಂದು ಆಕ್ರೋಶ ಹೊರ ಹಾಕುತ್ತಿರುವ ಭಕ್ತಾಧಿಗಳು, ನನ್ನ ಹೆಂಡತಿಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡುತ್ತಿರುವ ಗಂಡ ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆ ಬಳಿ.

ಹೌದು ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬಳು, ತನಗೆ ಲೈಗಿಂಕ‌ ಕಿರುಕುಳ‌ ನೀಡುತ್ತಿದ್ದಾರೆ ಎಂದು ಸೆಲ್ಫಿ ವಿಡಿಯೋ ಮಾಡಿ ಆರೋಪ ಮಾಡಿದ್ದಾಳೆ‌. ಐದು ಸಾವಿರ ಹಣ ಕೇಳಿದರೆ ರೂಂ ಗೆ ಬಾ, ಆಮೇಲೆ ಹಣ ಕೊಡುತ್ತೇನೆ ಎಂದು ಸ್ವಾಮೀಜಿ ಕರೆಯುತ್ತಿದ್ದಾನೆ, ಪ್ರತಿನಿತ್ಯ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದಾನೆ. ಮಹಿಳೆ ಒಂಟಿಯಾಗಿದ್ದಾಗ ಮನೆಗೆ ಹೋಗಿ ಕಿರುಕುಳ ನೀಡುತ್ತಿದ್ದಾನೆ ಹಾಗಾಗಿ ನನಗೆ ಆದ ರೀತಿ ಯಾವ ಮಹಿಳೆಗೂ ಆಗುವುದು ಬೇಡ, ನನಗೆ ನ್ಯಾಯ ಬೇಕು ಎಂದು ಮಹಿಳೆ ಆರೋಪಿಸಿ ವಿಡಿಯೋ ಹರಿ ಬಿಟ್ಟಿದ್ದಾಳೆ.

ಇನ್ನೂ ಈ ರೀತಿ ಗಂಭೀರ ಆರೋಪ ಎದುರಿಸುತ್ತಿರುವ ಸ್ವಾಮೀಜಿಯ ಹೆಸರು ಬ್ರಹ್ಮಾನಂದ ಗುರೂಜಿ ಅಂತ. ಈ ವಿಚಾರವಾಗಿ ಈತ ಹೇಳುವ ಮಾತೇ ಬೇರೆ. ಮಹಿಳೆ ಗಂಡ ನನಗೆ ಬಹಳ ಪರಿಚಯ. ಹಾಗಾಗಿ ಅವರು ನಮ್ಮ ಬಳಿ ಬಂದು ಒಂದು ಸೈಟ್ ಕೊಡಿಸುವುದಾಗಿ ಕೇಳಿಕೊಂಡರು. ಆಗ ನನಗೆ ಪರಿಚಯ ಇದ್ದ ಒಬ್ಬರ ಬಳಿ 11 ಲಕ್ಷಕ್ಕೆ ಸೈಟ್ ಕೊಡಿಸಿದ್ದ. ಅದು ಕೆಲವೇ ದಿನಗಳಲ್ಲಿ ಸೈಟ್ ಇ ಖಾತೆ ಮಾಡುವುದನ್ನ ಸರಕಾರ ನಿಲ್ಲಿಸಿತು. ಆಗ ಅವರ ಹಣವನ್ನ ವಾಪಸ್ ನೀಡಿದ್ದೇವೆ. ಈ ವೇಳೆ ಮಹಿಳೆ ನನ್ನ ಜೊತೆ ಸಲುಗೆಯಿಂದ ಮಾತ‌ನಾಡಲು ಮುಂದಾದಳು. ಆಗ ನಾನು ಅವರ ನಂಬರ್ ಬ್ಲಾಕ್ ಮಾಡಿದೆ. ನಂತರ ಕೂಡ ಬೇರೆ ಬೇರೆ ನಂಬರ್ ಗಳಿಂದ ನನಗೆ ಫೋನ್ ಮತ್ತು ಮೆಸೇಜ್ ಮಾಡಿದರು. ಆದರೆ ಈಗ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಇವರು ಮತ್ತು ನಮ್ಮ‌ಊರಿನಲ್ಲಿ ನನಗೆ ಆಗದವರು ನಮ್ಮ ವಿರುದ್ಧ ಷಡ್ಯಂತರ ಮಾಡಿದ್ದಾರೆ. ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು ಎಂದು ಹೇಳಿಕೆ ನೀಡಿದ್ದಾರೆ.ಇನ್ನೂ ಮಹಿಳೆಯ ಗಂಡ ಮಹಿಳಾ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೆ, ಇತ್ತ ಸ್ವಾಮೀಜಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ.

ಒಟ್ಟಾರೆ ಸೈಟ್ ನ ವಿಚಾರಕ್ಕೆ ಆರಂಭವಾದ ಮನಸ್ಥಾಪ ಈಗ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ವರೆಗೆ ತಲುಪಿದೆ. ಈಗಾಗಲೇ ದೂರು ಪ್ರತಿ ದೂರು ದಾಖಲಾಗಿದ್ದು ಪೊಲೀಸ್ ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಬೇಕಿದೆ.

Ramesh Babu

Journalist

Recent Posts

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

53 minutes ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

2 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

15 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

16 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

17 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

21 hours ago